Home Mangalorean News Kannada News ಅಂಗಡಿಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಅಂಗಡಿಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Spread the love

ಅಂಗಡಿಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಗರದ ಪಂಪ್ವೆಲ್ ಸಮೀಪದ ಕಪಿತಾನಿಯೊ ಬಳಿ ಜು.8ರಂದು ರಾತ್ರಿ ಅಂಗಡಿಯೊಂದಕ್ಕೆ ನುಗ್ಗಿ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನಝೀರ್ ಯಾನೆ ತೌಫೀಖ್ ಖಾನ್ ಮತ್ತು ಇಲ್ಯಾಸ್ ಖಾನ್ ಎಂದು ಗುರುತಿಸಲಾಗಿದೆ.

ಇವರು ಜು.8ರಂದು ರಾತ್ರಿ ಉಮ್ಮರ್ ಫಾರೂಕ್ ಎಂಬವರಿಗೆ ಸೇರಿದ ದಿನಸಿ ಅಂಗಡಿಗೆ ನುಗ್ಗಿ ಸುಮಾರು 10 ಲಕ್ಷ ರೂ. ಕಳವು ಮಾಡಿ ಪರಾರಿಯಾಗಿದ್ದರು.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ನೇತೃತ್ವದ ತಂಡವು ಪ್ರಕರಣ ಬೆಳಕಿಗೆ ಬಂದ 7 ಗಂಟೆಯೊಳಗೆ ಮಾಹಿತಿ ಕಲೆ ಹಾಕಿ ಬಂಧಿಸಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.


Spread the love

Exit mobile version