Home Mangalorean News Kannada News ಅಕ್ರಮ ಪಿಸ್ತೂಲ್ ಹೊಂದಿದ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರನ ಸೆರೆ

ಅಕ್ರಮ ಪಿಸ್ತೂಲ್ ಹೊಂದಿದ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರನ ಸೆರೆ

Spread the love

ಅಕ್ರಮ ಪಿಸ್ತೂಲ್ ಹೊಂದಿದ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರನ ಸೆರೆ

ಮಂಗಳೂರು: ನಗರದ ಹೊಯಿಗೆ ಬಝಾರ್ ಪರಿಸರದಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯೊಬ್ಬನು ಅಕ್ರಮವಾಗಿ ಪಿಸ್ತೂಲ್ ಹಾಗೂ ಇತರ ಮಾರಕಾಯುಧಗಳನ್ನು ಹೊಂದಿದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರನನ್ನು ವಶಕ್ಕೆ ಪಡೆದುಕೊಂಡು ಪಿಸ್ತೂಲ್, ತಲವಾರು ಹಾಗೂ ಇತರ ಮಾರಕಾಯುಧಗಳನ್ನು ವಶಪಡಿಸಿಕೊಂಡಿರುತ್ತಾರೆ.

ಬಂಧಿತನನ್ನು ಮಂಗಳೂರು ಹೊಯಿಗೆ ಬಝಾರ್ ನಿವಾಸಿ ಹೇಮಂತ್ ಕುಮಾರ್ @ ಹೇಮು (47) ಎಂದು ಗುರುತಿಸಲಾಗಿದೆ.

ಈ ಹಿಂದೆ ಅನೀಷ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯೋರ್ವನು ಯಾವುದೋ ಕೃತ್ಯ ನಡೆಸುವ ಉದ್ದೇಶದಿಂದ ತನ್ನ ವಶದಲ್ಲಿ ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ಹಾಗೂ ಸಜೀವ ಮದ್ದುಗುಂಡುಗಳು, ತಲವಾರುಗಳನ್ನು ಇಟ್ಟುಕೊಂಡಿದ್ದಾನೆ ಎಂಬ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿ ಆತನ ವಶದಲ್ಲಿದ್ದ ಪಿಸ್ತೂಲ್ ಹಾಗೂ 4 ಸಜೀವ ಮದ್ದುಗುಂಡುಗಳು, 2 ತಲವಾರುಗಳು, ಚೂರಿ, ಬೇಸ್ ಬಾಲ್ ಸ್ಟಿಕ್ ಹಾಗೂ ಎರಡು ಮೊಬೈಲ್ ಫೋನುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಪಿಸ್ತೂಲ್ ನ ಮೌಲ್ಯ ರೂ. 1 ಲಕ್ಷ ಆಗಿರುತ್ತದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,12,750/- ಆಗಿರುತ್ತದೆ. ಆರೋಪಿಯು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರನಾಗಿರುತ್ತಾನೆ. ಈತನು ಈ ಹಿಂದೆ ಮಂಗಳೂದು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕದ್ರಿ ಪಾರ್ಕ್ ಬಳಿ 2014 ನೇ ಇಸವಿಯಲ್ಲಿ ಅನೀಷ್ ಶೆಟ್ಟಿ ಎಂಬಾತನ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುತ್ತಾನೆ. ಈತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಪಿಸ್ತೂಲ್ ಹಾಗೂ ಇತರ ಮಾರಾಕಾಯುಧಗಳನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಟಿ. ಆರ್ ಸುರೇಶ್ ಐ.ಪಿ.ಎಸ್ ರವರ ನಿರ್ದೇಶನದಲ್ಲಿ ಪೊಲೀಸ್ ಉಪ ಆಯುಕ್ತರು( ಕಾ ಮತ್ತು ಸು) ರವರಾದ ಹನುಮಂತರಾಯ, ಐ.ಪಿ.ಎಸ್ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯರವರಾದ ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯನ್ನು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ನಡೆಸಿರುತ್ತಾರೆ.


Spread the love

Exit mobile version