ಉಚ್ಚಿಲ : ಬೈಕ್ ಬಸ್ಸು ಅಫಘಾತ ಮಧ್ಯ ವಯಸ್ಕನ ಸಾವು

Spread the love

ಉಚ್ಚಿಲ: ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಫಘಾತದಲ್ಲಿ ಮಧ್ಯ ವಯಸ್ಕ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ ಬಳಿ ಶುಕ್ರವಾರ ಸಂಭವಿಸಿದೆ.

ಮೃತಪಟ್ಟವರನ್ನು ಪಡುಬಿದ್ರಿ ಇನ್ನಾ ನಿವಾಸಿ ಕಲಂದರ್ ಎಂದು ಗುರುತಿಸಲಾಗಿದೆ.

acci_ucchilakalandar 08-05-2015 20-44-005

ಪೋಲಿಸ್ ಮಾಹಿತಿಗಳ ಪ್ರಕಾರ ಶುಕ್ರವಾರ ಸಂಜೆ ಕಲಂದರ್ ತಮ್ಮ ಮೋಟಾರ್ ಬೈಕಿನಲ್ಲಿ ಪಡುಬಿದ್ರಿಯಿಂದ ಉಡುಪಿ ಕಡೆಗೆ ತೆರಳುತ್ತಿದ್ದು, ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ವೇಗವಾಗಿ ಹಿಂದಿನಿಂದ ಬೈಕಿಗೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕಿನಿಂದ ಆಯತಪ್ಪಿ ರಸ್ತೆಗೆ ಬಿದ್ದಿದ್ದು ತೀವೃ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ.

ಸ್ಥಳಕ್ಕೆ ಪಡುಬಿದ್ರಿ ಪೋಲಿಸರು ಆಗಮಿಸಿದ್ದು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


Spread the love