ಉಡುಪಿ ಬ್ಲಾಕ್ ಕಾಂಗ್ರೆಸ್‍ ವತಿಯಿಂದ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆ

Spread the love

ಉಡುಪಿ ಬ್ಲಾಕ್ ಕಾಂಗ್ರೆಸ್‍ವತಿಯಿಂದ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆ

ಉಡುಪಿ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆಯನ್ನು ಶಿವಳ್ಳಿ ಗ್ರಾಮ ಪಂಚಾಯತ್‍ನ ಮಾಜಿ ಅಧ್ಯಕ್ಷರಾದ ಹಿರಿಯ ಕಾಂಗ್ರೆಸ್ಸಿಗ   ಗೋಪಾಲ ಶೆಟ್ಟಿಯವರು ಪಕ್ಷದ ಧ್ವಜವಂದನೆಯನ್ನು ನೆರವೇರಿಸಿ ಮಾತನಾಡುತ್ತಾ 135 ವರ್ಷಗಳ ಇತಿಹಾಸವುಳ್ಳ ಕಾಂಗ್ರೆಸ್ ಪಕ್ಷ ದೇಶದ ಸಮಗ್ರ ಅಭಿವೃದ್ಧಿಗೆ ತನ್ನದೇ ಕೊಡುಗೆಯನ್ನು ನೀಡಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸುವುದರೊಂದಿಗೆ ದೇಶದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಹಾರೈಸಿದರು.

ಮಾಜಿ ಸಚಿವರಾದ  ಪ್ರಮೋದ್ ಮಧ್ವರಾಜ್‍ರವರು ಮಾತನಾಡುತ್ತಾ ಪ್ರಾಚೀನ ಪಕ್ಷವಾದ ಕಾಂಗ್ರೆಸನ್ನು ಇಂದು ಅಧಿಕಾರದಲ್ಲಿರುವ ಪಕ್ಷ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಕ್ತಗೊಳಿಸುವ ಹುನ್ನಾರದಲ್ಲಿ ತೊಡಗಿದರೂ ಜನತೆ ನಿರಂತರವಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಾ ಬರುತ್ತಿದ್ದಾರೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನು ವಾರಕ್ಕೆ ಒಂದು ಗಂಟೆಯಾದರೂ ಬಿಡುವು ಮಾಡಿಕೊಂಡು ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಪಕ್ಷ ಬಲಿಷ್ಟವಾಗುವುದರಲ್ಲಿ ಸಂಶಯವಿಲ್ಲ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮಾತನಾಡುತ್ತಾ ಬ್ರಿಟೀಷರ ದಬ್ಬಾಳಿಕೆಯಿಂದ ದೇಶವನ್ನು ವಿಮೋಚನೆಗೊಳಿಸುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಪಕ್ಷಕ್ಕೆ ತಾತ್ಕಾಲಿಕ ಹಿನ್ನಡೆಯಾದರೂ ಪಕ್ಷವನ್ನು ಸಂಘಟಿಸಿ ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ತರುವುದು ನಿಶ್ಚಿತ ಎಂದರು.

ಈ ಸಂದರ್ಭ ಭಾಸ್ಕರ್ ರಾವ್ ಕಿದಿಯೂರು, ಹರೀಶ್ ಕಿಣಿ, ಜ್ಯೋತಿ ಹೆಬ್ಬಾರ್, ಅಣ್ಣಯ್ಯ ಸೇರಿಗಾರ್, ಮೀನಾಕ್ಷಿ ಮಾಧವ ಬನ್ನಂಜೆ, ಸತೀಶ್ ಅಮೀನ್ ಪಡುಕರೆ, ವಿಜಯ ಬೈಲೂರು, ಹಬೀಬ್ ಅಲಿ, ಉಪೇಂದ್ರ ಮೆಂಡನ್, ಯತೀಶ್ ಕರ್ಕೇರ, ಆಕಾಶ್ ರಾವ್, ಕೀರ್ತಿ ಶೆಟ್ಟಿ, ಕಿಶೋರ್ ಎರ್ಮಾಳ್, ಶ್ರೀನಿವಾಸ ಹೆಬ್ಬಾರ್, ಉದ್ಯಾವರ ನಾಗೇಶ್ ಕುಮಾರ್, ಶಶಿರಾಜ್ ಕುಂದರ್, ಗಣೇಶ್ ನೆರ್ಗಿ, ಅನಂತ್ ನಾಯ್ಕ್, ಲೂಯೀಸ್ ಲೋಬೋ, ನವೀನ್ ಶೆಟ್ಟಿ, ಸುನಿಲ್ ಬಂಗೇರಾ, ಆಶಾ ಚಂದ್ರಶೇಖರ್,


Spread the love