ಎಸ್ ಡಿಎಮ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

Spread the love

ಎಸ್ ಡಿಎಮ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ನಗರದ ಎಸ್ ಡಿ ಎಂ ಬಿಸ್ನೆಸ್ ಮ್ಯಾನೇಜ್ ಮೆಂಟ್ ಕಾಲೇಜಿ ಪ್ರಥಮ ವರ್ಷದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ವರದಿಯಾಗಿದೆ.

ಮೃತನನ್ನು ಅತ್ತಾವರ ನಿವಾಸಿ ಅಭಿಷೇಕ್ ಸಿ ಎಚ್ (18) ಎಂದು ಗುರುತಿಸಲಾಗಿದೆ.

ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಅಭಿಷೇಕ್ ತನ್ನ ತಾಯಿಯನ್ನು ಬ್ಯಾಂಕಿಗೆ ಕರೆದು ಕೊಂಡು ಹೋಗಿ ವಾಪಾಸು ಮನೆಗೆ ಬಂದಿದ್ದು, ತನ್ನ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೂಡಲೇ ಆತನನ್ನು ನಗರದ ಆಸ್ಪತ್ರೆಗೆ ದಾಖಲಿಸಿದ್ದು ದಾರಿಮಧ್ಯೆ ಮೃತಪಟ್ಟಿದ್ದಾನೆ.

ಅಭಿಷೇಕ್ ತಂದೆ ಚಿದಾನಂದ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದು, ತಾಯಿ ಆಶಾಲತಾ ಹಾಗೂ ಅಭಿಷೇಕ್ ಅಣ್ಣ ಅಶ್ವಿನ್ ನಗರದಲ್ಲಿ ವಾಸವಾಗಿದ್ದರೆ ಆತನ ಸಹೋದರಿ ಅಶ್ವಿತ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದಾಳೆ. ಮೂಲಗಳ ಪ್ರಕಾರ ಅಭಿಷೇಕ್ ತಂದೆ ಆತನನನ್ನು ವಿದೇಶಕ್ಕೆ ಕರೆದೊಯ್ಯಲು ಇಚ್ಚಿಸಿದ್ದರು ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.


Spread the love