Home Mangalorean News Kannada News ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಇಬ್ಬರ ಬಂಧನ

ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಇಬ್ಬರ ಬಂಧನ

Spread the love

ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಇಬ್ಬರ ಬಂಧನ

ಮಂಗಳೂರು: ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಪಾಲಾರ್ ಬಂದಡ್ಕ ನಿವಾಸಿಗಳಾದ ಶಿವಪ್ರಸಾದ್ ಭಟ್ ಕೆ (52) ಮತ್ತು ಚಂದ್ರನ ಟಿ (34) ಎಂದು ಗುರುತಿಸಲಾಗಿದೆ.

ಸಪ್ಟೆಂಬರ್ 3 ರಂದು ಪುತ್ತೂರು ತಾಲೂಕು ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಓಮಿನಿ ಮಾರುತಿ ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದಾಗ ಪುತ್ತೂರು ನಗರ ಪೊಲೀಸ್ ಠಾಣಾ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ತಡೆದು ಪರಿಶೀಲಿಸಲಾಗಿ ಓಮಿನಿ ಕಾರಿನ ಒಳಗೆ ಹಿಂಸಾತ್ಮಾಕ ರೀತಿಯಲ್ಲಿ ಕರುವಿನ ಕೈ ಕಾಲುಗಳನ್ನು ಕಟ್ಟಿ ಅಡ್ಡವಾಗಿ ಮಲಗಿಸಿರುವುದು ಕಂಡು ಬಂದಿರುತ್ತದೆ. ಆರೋಪಿಗಳನ್ನು ಬಂಧೀಸಿರುವ ಪೊಲೀಸರು , ವಾಹನ ಮತ್ತು ಜಾನುವಾರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

Exit mobile version