ಕಾವ್ಯ ಮನೆಗೆ ಮಧು ಬಂಗಾರಪ್ಪ ಭೇಟಿ, ಸಾಂತ್ವಾನ ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ

Spread the love

ಕಾವ್ಯ ಮನೆಗೆ ಮಧು ಬಂಗಾರಪ್ಪ ಭೇಟಿ, ಸಾಂತ್ವಾನ ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಮೂಡಬಿದ್ರೆ: ಮೂಡಬಿದ್ರೆಯ ವಿದ್ಯಾರ್ಥಿನಿ ಕಾವ್ಯ ಅವರ ಮನೆಗೆ ಸೋಮವಾರ ಜೆಡಿಎಸ್ ಶಾಸಕ ಯುವ ಜನತಾದಳ ರಾಜ್ಯಾಧ್ಯಕ್ಷ ಮಧುಬಂಗಾರಪ್ಪ ಭೇಟಿ ನೀಡಿ ಆಕೆಯ ಪೋಷಕರಿಗೆ ಸಾಂತ್ವಾನ ಹೇಳಿದರು.

ಈ ವೇಳೆ ಮಾತನಾಡಿದ ಅವರು ಕಾವ್ಯಾ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಹಾಗೂ ಕಾವ್ಯ ಪ್ರಕರಣದಲ್ಲಿ ಪೋಷಕರಿಗಿರುವ ಸಂಶಯಗಳಿಗೆ ಉತ್ತರ ಸಿಗಬೇಕು  ಕಾವ್ಯ ಪ್ರಕರಣದಲ್ಲಿ ಹಲವು ಸಂಶಯಗಳಿವೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆಯಾಗಬೇಕು” ಎಂದು ಆಗ್ರಹಿಸಿದರು. ಸಾವಿನ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ನಡೆಸಿ ಕಾವ್ಯಳ ಸಾವಿಗೆ ಸಂಬಂಧಿಸಿ ಆಕೆಯ ಪೋಷಕರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮಹಮ್ಮದ್ ಕುಂಞ ,ಯುವ ಜನತಾದಳದ ಅಧ್ಯಕ್ಷರಾದ ಅಕ್ಷಿತ್ ಸುವರ್ಣ ಹಾಗೂ ಮತ್ತಿತರ ಜೆಡಿಎಸ್ ಮುಖಂಡರಾದ ಎಮ್. ಕೆ. ಖಾದರ್, ರಾಮ್ ಗಣೇಶ್, ವಸಂತ್ ಪೂಜಾರಿ, ಶ್ರೀನಾಥ್ ರೈ, ಗೋಪಾಲಕೃಷ್ಣ, ರತ್ನಾಕರ, ಶಿನಾನ್, ಹಿತೇಶ್, ದೀಪಕ್ ಉಪಸ್ಥಿತರಿದ್ದರು.


Spread the love