Home Mangalorean News Kannada News ಕುದ್ರೋಳಿ ದಸರಾ ಮರವಣಿಗೆ : ವಾಹನ ಸಂಚಾರ ಮಾರ್ಗ ಬದಲಾವಣೆ

ಕುದ್ರೋಳಿ ದಸರಾ ಮರವಣಿಗೆ : ವಾಹನ ಸಂಚಾರ ಮಾರ್ಗ ಬದಲಾವಣೆ

Spread the love

ಕುದ್ರೋಳಿ ದಸರಾ ಮರವಣಿಗೆ : ವಾಹನ ಸಂಚಾರ ಮಾರ್ಗ ಬದಲಾವಣೆ

ಮಂಗಳೂರು: ಅಕ್ಟೋಬರ್ 13 ರಂದು 4 ಗಂಟೆಗೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಗಳ ಶೋಭಾಯಾತ್ರೆಯು ಮಣ್ಣಗುಡ್ಡೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ – ಲಾಲ್ ಬಾಗ್ ಪಿವಿಎಸ್-ನವಭಾರತ್ ವೃತ್ತ – ಕೆಎಸ್ಆರ್ ರಸ್ತೆ – ಕೆ.ಬಿ ಕಟ್ಟೆ ವೃತ್ತ – ಓಂ ಮಹಲ್ ಜಂಕ್ಷನ್ ಗಣಪತಿ ಹೈಸ್ಕೂಲ್ ರಸ್ತೆ – ಮೋಹಿನಿ ವಿಲಾಸ, ರಥಬೀದಿ-ಲೋವರ್ ಕಾರ್ ಸ್ಟ್ರೀಟ್ – ನ್ಯೂಚಿತ್ರಾ – ಅಳಕೆಯ ಮೂಲಕ ಕುದ್ರೋಳಿ ದೇವಸ್ಥಾನಕ್ಕೆ ಬಂದು ದೇವಳದ ಕೆರೆಯಲ್ಲಿ ಜಲಸ್ಥಂಭನಗೊಳ್ಳಲಿದೆ ಈ ಹಿನ್ನಲೆಯಲ್ಲಿ ಅಕ್ಟೋಬರ್ 13 ರ ಮದ್ಯಾಹ್ನ 2ಗಂಟೆಯಿಂದ ಅಕ್ಟೋಬರ್ 14 ರಂದು ಬೆಳಿಗ್ಗೆ 6ಗಂಟೆಯವರೆಗೆ ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರದ ಹಿತ ದೃಷ್ಟಿಯಿಂದ ರಸ್ತೆಯಲ್ಲಿ ವಾಹನ ಪಾಕಿರ್ಂಗ್ ಹಾಗೂ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಾಡು ಮಾಡುವಂತೆ ಪೆÇಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಆದೇಶ ಹೊರಡಿಸಿದ್ದಾರೆ.

ವಾಹನ ಸಂಚಾರ ನಿಷೇಧಿಸಲಾಗಿರುವ ಮಾರ್ಗಗಳ ವಿವರ:-
ಮೆರವಣಿಗೆ ಸಾಗುವ ಕುದ್ರೋಳಿ ದೇವಸ್ಥಾನ – ಮಣ್ಣಗುಡ್ಡೆ- ಬ್ರಹ್ಮಶ್ರೀ ನಾರಾಯಣ ಗುರು ವೃತ್ತ -ಲಾಲ್ಭಾಗ್ – ಪಿವಿಎಸ್ ಎಂ.ಗೋವಿಂದ ಪೈ ವೃತ್ತ – ಕೆಎಸ್ಆರ್ ರಸ್ತೆ – ಹಂಪನಕಟ್ಟ ಜಂಕ್ಷನ್ – ಕೆ. ಬಿ. ವೃತ್ತ – ಗಣಪತಿ ಹೈಸ್ಕೂಲ್ ರಸ್ತೆ – ಮೋಹಿನಿ, ವಿಲಾಸ ಜಂಕ್ಷನ್ ಓಂ ಮಹಲ್ ಜಂಕ್ಷನ್ – ರಥಬೀದಿ – ಲೋವರ್ ಕಾರ್ಸ್ಟ್ರೀಟ್ – ನ್ಯೂಚಿತ್ರಾ-ಅಳಕೆ – ಕುದ್ರೋಳಿ ದೇವಸ್ಥಾನದ ವರೆಗೆ ವಾಹನ ಸಂಚಾರವನ್ನು ಹಾಗೂ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಕೊಟ್ಟಾರ ಚೌಕಿ ಮುಖಾಂತರ ನಗರಕ್ಕೆ ಬರುವ ಎಲ್ಲಾ ತರಹದ ವಾಹನಗಳ ನಗರ ಪ್ರವೇಶ ನಿಷೇಧಿಸಲಾಗಿದೆ. ಉರ್ವ ಸ್ಟೋರ್ ಕಡೆಯಿಂದ ಹಾಗೂ ಉರ್ವ ಮಾರ್ಕೆಟ್ ಕಡೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಡೆಗೆ ಬರುವ/ಹೋಗುವ ಎಲ್ಲಾ ತರಹದ ವಾಹನಗಳನ್ನು ನಿಷೇಧಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಕಡೆಯಿಂದ ಎಂ. ಜಿ. ರಸ್ತೆ [ಲಾಲ್ಬಾಗ್ ಜಂಕ್ಷನ್ ಮೂಲಕ] ಕಡೆಗೆ ಬರುವ/ಹೋಗುವ ಎಲ್ಲಾ ತರಹದ ವಾಹನಗಳನ್ನು ನಿಷೇಧಿಸಲಾಗಿದೆ. ಪಿಂಟೋ ಬೇಕರಿ ಜಂಕ್ಷನ್ನಿಂದ ಕೊಡಿಯಾಲ್ಗುತ್ತು ಜಂಕ್ಷನ್ ಮುಖಾಂತರ ಎಂ. ಜಿ. ರಸ್ತೆಗೆ ಕಡೆಗೆ ಬರುವ/ಹೋಗುವ ಎಲ್ಲಾ ತರಹದ ವಾಹನಗಳನ್ನು ನಿಷೇಧಿಸಲಾಗಿದೆ.

ಪಶು ಆಸ್ಪತ್ರೆ ಜಂಕ್ಷನ್ (ಕಪುಚಿನ್ ಚರ್ಚ್)ನಿಂದ ಕೋರಿರೊಟ್ಟಿ ಜಂಕ್ಷನ್ [ಎಂ ಜಿ ರಸ್ತೆ) ಕಡೆಗೆ ಸಾಗುವ ಎಲ್ಲಾ ತರಹದ ವಾಹನ ಸಂಚಾರ ನಿಷೇಧಿಸಲಾಗಿದೆ. ಕರಂಗಲ್ಪಾಡಿ ಜಂಕ್ಷನ್ನಿಂದ ಪಿ.ವಿ.ಎಸ್ ಜಂಕ್ಷನ್ಗೆ ಹೋಗುವ ಎಲ್ಲಾ ತರಹದ ವಾಹನಗಳನ್ನು ನಿಷೇಧಿಸಲಾಗಿದೆ. ಕೋರ್ಟ್ ರೋಡ್ನಿಂದ ಕೆ.ಎಸ್.ರಾವ್ ರಸ್ತೆಗೆ ಬರುವ ಎಲ್ಲಾ ತರಹದ ವಾಹನಗಳನ್ನು ನಿಷೇಧಿಸಲಾಗಿದೆ. ಬಾವುಟಗುಡ್ಡೆ ಕಡೆಯಿಂದ ಸಿಟಿ ಸೆಂಟರ್ ಮೂಲಕ ಕೆ.ಎಸ್.ರಾವ್ ರಸ್ತೆಗೆ ಬರುವ ಎಲ್ಲಾ ತರಹದ ವಾಹನಗಳನ್ನು ನಿಷೇಧಿಸಲಾಗಿದೆ. ಹಂಪನಕಟ್ಟೆ ಜಂಕ್ಷನ್ನಿಂದ ಕೆ.ಎಸ್.ರಾವ್ ರಸ್ತೆಗೆ ಹೋಗುವ ಎಲ್ಲಾ ತರಹದ ವಾಹನಗಳನ್ನು ನಿಷೇಧಿಸಲಾಗಿದೆ. ಕುದ್ರೋಳಿ ನಾರಾಯಣಗುರು ಕಾಲೇಜು ಬಳಿಯಿಂದ ನವದುರ್ಗೆಯರ ಟ್ಯಾಬ್ಗಳು ತಯಾರಿಗೊಂಡು ದೇವಸ್ಥಾನಕ್ಕೆ ಬರಲಿರುವುದರಿಂದ ಕುದ್ರೋಳಿ ನಾರಾಯಣಗುರು ಕಾಲೇಜು ಜಂಕ್ಷನ್ ರಸ್ತೆಯಿಂದ ಬರ್ಕೆ ಜಂಕ್ಷನ್ ತನಕ ಮತ್ತು ಬರ್ಕೆ ಜಂಕ್ಷನ್ನಿಂದ ದುರ್ಗಾಮಹಲ್ ಜಂಕ್ಷನ್ವರೆಗೆ ಹಾಗೂ ದುರ್ಗಾಮಹಲ್ ಜಂಕ್ಷನ್ನಿಂದ ಅಳಕೆ ಬ್ರಿಡ್ಜ್ ತನಕ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಟ್ಯಾಬ್ಲೊಗಳು ಉರ್ವ ಮಾರ್ಕೆಟ್ ಜಂಕ್ಷನ್ನಿಂದ ಗಾಂಧಿನಗರ ಮುಖಾಂತರ ಮಣ್ಣಗುಡ್ಡ ಗುರ್ಜಿ ಜಂಕ್ಷನ್ನಲ್ಲಿ ಸರದಿ ಸಾಲಿನಲ್ಲಿ ಬಂದು ನಿಂತು ಇಲ್ಲಿಂದ ಟ್ಯಾಬ್ಗಳು ಮೆರವಣಿಗೆಯಲ್ಲಿ ಮುಂದುವರೆಯಲಿರುವುದರಿಂದ ಮಣ್ಣಗುಡ್ಡ ಗುರ್ಜಿ ಜಂಕ್ಷನ್ನಿಂದ ಉರ್ವ ಮಾರ್ಕೆಟ್ ಜಂಕ್ಷನ್ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಮಣ್ಣಗುಡ್ಡ ಗಾಂಧಿನಗರ ಪಾರ್ಕ್ ಮುಂಭಾಗದ ರಸ್ತೆ ಮತ್ತು ಗಾಂಧಿನಗರ ಒಂದರಿಂದ ಎಂಟರವರೆಗಿನ ಅಡ್ಡ ರಸ್ತೆಗಳ ಇಕ್ಕೆಲಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲ್ಲುಗಡೆಯನ್ನು ನಿಷೇಧಿಸಲಾಗಿದೆ.

ಉಡುಪಿ ಕಡೆಯಿಂದ ಕೊಟ್ಟಾರ ಚೌಕಿ ಮುಖಾಂತರ ನಗರಕ್ಕೆ ಬರುವ ಎಲ್ಲಾ ತರಹದ ವಾಹನಗಳು ಕುಂಟಿಕಾನ- ಕೆ.ಪಿ.ಟಿ-ನಂತೂರು ಮುಖೇನ ನಗರ ಪ್ರವೇಶಿಸುವುದು. ಉರ್ವಾ ಸ್ಟೋರ್ ಕಡೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಮೂಲಕ ನಗರ ಪ್ರವೇಶಿಸುವ ಎಲ್ಲಾ ತರಹದ ವಾಹನಗಳು ಕೋಟೆಕಣಿ ರಸ್ತೆಯಾಗಿ-ಕೊಟ್ಟಾರ ಕ್ರಾಸ್- ಕಾಪಿಕಾಡು-ಕೆ.ಎಸ್.ಆರ್.ಟಿ.ಸಿ-ಬಿಜೈ ಮಾರ್ಕೆಟ್ ಜಂಕ್ಷನ್ ಮುಖಾಂತರ ಸಂಚರಿಸುವುದು. ನಗರದಿಂದ ನ್ಯೂ ಚಿತ್ರಾ ಜಂಕ್ಷನ್ ಮೂಲಕ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಖೇನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳು ನ್ಯೂಚಿತ್ರಾ ಜಂಕ್ಷನ್ನಿಂದ ಕಂಡತ್ಪಳ್ಳಿ – ಮಂಡಿ – ಕುದ್ರೋಳಿ – ಬೊಕ್ಕಪಟ್ಲ – ಸುಲ್ತಾನ್ಬತ್ತೇರಿ ಮೂಲಕ ಸಂಚರಿಸಬೇಕು.

ನಗರದಿಂದ ಕೆ.ಎಸ್ ರಾವ್ ರಸ್ತೆ ಮೂಲಕ ಸಂಚರಿಸುವ ಎಲ್ಲಾ ತರಹದ ವಾಹನಗಳು ಹಂಪನಕಟ್ಟ ಜಂಕ್ಷನ್ – ಡಾ. ಅಂಬೇಡ್ಕರ್ ಸರ್ಕಲ್ ಮುಖಾಂತರ ಸಂಚರಿಸುವುದು. ಕೆ.ಎಸ್.ಆರ್.ಟಿ.ಸಿ. ಬಸ್ಸು ನಿಲ್ದಾಣದಿಂದ ಉಡುಪಿ ಹಾಗೂ ಪಂಪುವೆಲ್ ಕಡೆಗೆ ಹೋಗುವ/ಬರುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಕುಂಟಿಕಾನ / ಕೆ.ಪಿ.ಟಿ ಜಂಕ್ಷನ್ ಮುಖೇನ ಸಂಚರಿಸುವಂತೆ ಪೊಲೀಸ್ ಆಯುಕ್ತ ಪ್ರಕಟಣೆ ತಿಳಿಸಿದೆ.

ಕಟೀಲು ದೇವಸ್ಥಾನ ದಸರಾ : ವಾಹನ ಸಂಚಾರ ಬದಲಾವಣೆ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರುಗಲಿರುವ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ಸಮಯ ಅಕ್ಟೋಬರ್ 7ರಿಂದ 13ರ ವೆರೆಗೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯ ವರೆಗೆ ವಾಹನ ನಿಲುಗಡೆ ನಿಷೇಧ ಹಾಗೂ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡುವಂತೆ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಆದೇಶ ಹೊರಡಿಸಿದ್ದಾರೆ.

ಮಂಗಳೂರು ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್‍ನಿಂದ ಏಕಮುಖವಾಗಿ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರಬೇಕು. ಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ-ಮಂಗಳೂರು ಕಡೆಗೆ ಸಂಚರಿಸಬೇಕು. ಉಲ್ಲಂಜೆ ರಸ್ತೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಮತ್ತು ಮಲ್ಲಿಗೆಯಂಗಡಿಯಿಂದ ಕಟೀಲು/ಮಂಗಳೂರು ಕಡೆಗೆ ಹೋಗುವ ವಾಹನಗಳು ಮಲ್ಲಿಗೆಯಂಗಡಿ ಜಂಕ್ಷನ್‍ನಿಂದ ಗಿಡಿಗೆರೆ ರಸ್ತೆಗೆ ಏಕಮುಖವಾಗಿ ಚಲಿಸಿ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರಬೇಕು.

ಕಾರು ಹಾಗೂ ಇತರ ವಾಹನಗಳಿಗೆ ಪದವಿ ಪೂರ್ವ ಕಾಲೇಜು ಮೈದಾನ, ಸಿದ್ಧ ಪ್ರದೇಶಗಳಲ್ಲಿ ವಾಹನಗಳ ಪಾಕಿರ್ಂಗ್‍ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ರಥ ಬೀದಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. (ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಆದೇಶಿಸಲಾಗಿದೆ.


Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version