ಕೊಲ್ಲೂರು ದೇವಸ್ಥಾನಕ್ಕೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಭೇಟಿ

Spread the love

ಕೊಲ್ಲೂರು ದೇವಸ್ಥಾನಕ್ಕೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಭೇಟಿ

ಕುಂದಾಪುರ ಸಮೀಪದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಶನಿವಾರ ಸಂಜೆ ಭೇಟಿ ನೀಡಿದ ಕೇರಳ ರಾಜ್ಯದ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಶ್ರೀದೇವಿಯ ದರ್ಶನ ಪಡೆದು ಖುತ್ವೀಜರು ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ದೇಗುಲದ ವತಿಯಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇಗುಲದ ಆಡಳಿತಾಧಿಕಾರಿ ಕುಂದಾಪುರ ಉಪವಿಭಾಗಾಧಿಕಾರಿ ಕೆ.ಮಹೇಶ್ಚಂದ್ರ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ರಾಜ್ಯಪಾಲರನ್ನು ಗೌರವಿಸಿದರು. ಖುತ್ವೀಜರಾದ ಎನ್.ನರಸಿಂಹ ಅಡಿಗ, ಎನ್.ಸುಬ್ರಮಣ್ಯ ಅಡಿಗ ಇದ್ದರು.


Spread the love
Subscribe
Notify of

0 Comments
Inline Feedbacks
View all comments