Home Mangalorean News Kannada News ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

Spread the love
RedditLinkedinYoutubeEmailFacebook MessengerTelegramWhatsapp

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಮಂಗಳೂರು: ಉರ್ವಾ ಪೋಲಿಸ್ ಠಾಣಾ ವ್ಯಾಪ್ತಿಯ ಮಾರಿಗುಡಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಖಚಿತ ಮಾಹಿತಿ ಮೇರೆಗೆ ಉರ್ವ ಠಾಣಾ ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಉರ್ವ ನಿವಾಸಿ ಮಹೇಶ ಯಾನೆ ಮಾಚ(24), ಬೊಕ್ಕಪಟ್ಟಣ ನಿವಾಸಿ ರಿತೆಶ್ ಯಾನೆ ರೀತು (20), ಉರ್ವ ನಿವಾಸಿ ಸುದರ್ಶನ್ ಯಾನೆ ಸುಧಾ ಮತ್ತು ಅಶೋಕ ನಗರ ನಿವಾಸಿ ರಿತೇಶ‍್್ (21) ಎಂದು ಗುರುತಿಸಲಾಗಿದೆ.

ಜುಲೈ 1ರಂದು ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಬಂಧಿಸಿದಾಗ, ಬಂಧಿತರಿಂದ 1 ಕೆಜಿ 50ಗ್ರಾಂ ಗಾಂಜಾ, 4 ಮೊಬೈಲ್ ಫೋನ್ ಮತ್ತು ನಗದನ್ನು ವಶಪಡಿಸಿಕೊಂಡಿದ್ದು, ಒಟ್ಟು ಮೊತ್ತ ರೂ 55000 ಆಗಿದೆ.

ಈ ಬಗ್ಗೆ ಉರ್ವ ಠಾಣೆಯಲ್ಲಿ ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


Spread the love

Exit mobile version