ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಕುಮಾರಸ್ವಾಮಿ ಹುಟ್ಟುಹಬ್ಬ ಪ್ರಯುಕ್ತ ವಿಶೇಷ ಪೂಜೆ

Spread the love

ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಕುಮಾರಸ್ವಾಮಿ ಹುಟ್ಟುಹಬ್ಬ ಪ್ರಯುಕ್ತ ವಿಶೇಷ ಪೂಜೆ

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಯವರ 59ನೇ ಹುಟ್ಟುಹಬ್ಬವನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾ ದಳ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ರವರ ನೇತೃತ್ವದಲ್ಲಿ ಕುದ್ರೊಳಿ ಶ್ರೀ ಗೊಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾರ್ಚನೆ ನೆರವೇರಿಸುವ ಮೂಲಕ ಆಚರಿಸಲಾಯಿತು.

ಈ ವೇಳೆ ಮುಖ್ಯಮಂತ್ರಿಗಳು ಈ ರಾಜ್ಯದಲ್ಲಿ ಇನಷ್ಟು ಪ್ರಗತಿಪರ ಯೋಜನೆಗಳನ್ನು ಬಡವರಿಗಾಗಿ ರೂಪಿಸಲು ದೇವರು ಅವರಿಗೆ ಇನ್ನಷ್ಟು ಶಕ್ತಿ ಮತ್ತು ಆರೋಗ್ಯವನ್ನು ನೀಡಲಿ ಎಂದು ವಿಶೇಷ ವಾಗಿ ಪ್ರಾರ್ಥಿಸಲಾಯಿತು

ಈ ಸಂದರ್ಭದಲ್ಲಿ ಜಿಲ್ಲೆಯ ಯುವ ಕಾರ್ಯದರ್ಶಿ ಮೊಹಮ್ಮದ್ ಫೈಝಲ್ , ಮಂಗಳೂರು ಉತ್ತರ ಪ್ರಧಾನ ಕಾರ್ಯದರ್ಶಿ ಭರತ್ ಜಿ ಹೆಗ್ಡೆ, ಉತ್ತರ ಅಧ್ಯಕ್ಷ ರತೀಶ್ ಕರ್ಕೇರ, ಲಿಕಿತ್ ಅಂಚನ್ ,ಉತ್ತರ ಉಪಾಧ್ಯಕ್ಷ ಹಿತೇಶ್ ರೈ,ವಿದ್ಯಾರ್ಥಿ ಜನತಾದಳ ಅಧ್ಯಕ್ಷ ಸಿನಾನ್ ಮತ್ತು ಹಲವರು ಉಪಸ್ಥಿತರಿದ್ಧರು.


Spread the love