ದೀಪಕ್ ರಾವ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ; ಕುಟುಂಬಿಕರಿಗೆ ಸಾಂತ್ವನ

Spread the love

ದೀಪಕ್ ರಾವ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ; ಕುಟುಂಬಿಕರಿಗೆ ಸಾಂತ್ವನ

ಮಂಗಳೂರು: ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್ ರಾವ್ ಅವರ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಈ ವೇಳೆ ಮೃತ ದೀಪಕ್ ಮನೆಯವರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ದೀಪಕ್ ಮನೆಯ ಸಾಲದ ಬಗ್ಗೆ ಮಾಹಿತಿ ಪಡೆದ ಸಿದ್ದರಾಮಯ್ಯ ದೀಪಕ್ ಸಹೋದರ ಸತೀಶ್ ಅವರಿಗೆ ಎಮ್ ಆರ್ ಪಿ ಎಲ್ ನಲ್ಲಿ ಕೆಲಸ ಕೊಡಿಸುವಂತೆ ಜಿಲ್ಲಾಧಿಕಾರಿ ಸಶಿಕಾಂತ್ ಸೆಂಥಿಲ್ ಅವರಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಈ ವೇಳೆ ದೀಪಕ್ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಕುಟುಂಬಿಕರು ಮನವಿ ಮಾಡಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

ಮುಖ್ಯಮಂತ್ರಿ ಆಗಮನದ ಹಿನ್ನಲೆಯಲ್ಲಿ ದೀಪಕ್ ಮನೆಯ ಸುತ್ತ ಬಿಗಿ ಪೋಲಿಸ್ ಭದ್ರತೆಯನ್ನು ಒದಗಿಸಿದ್ದು, ಎಡಿಜಿಪಿ ಕಮಲ್ ಪಂತ್, ನಗರ ಪೋಲಿಸ್ ಆಯುಕ್ತ ಟಿ ಆರ್ ಸುರೇಶ್, ಡಿಸಿಪಿ ಹನುಮಂತನಾಯಕ್, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಶಾಸಕ ಬಾವಾ, ಮಂಗಳೂರು ಮೇಯರ್ ಕವಿತಾ ಸನೀಲ್ ಉಪಸ್ಥಿತರಿದ್ದರು.


Spread the love