Home Mangalorean News Kannada News ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ಧಾಳಿ 9 ಲಾರಿ ವಶ

ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ಧಾಳಿ 9 ಲಾರಿ ವಶ

Spread the love

ಬಂಟ್ವಾಳ: ತಾಲೂಕಿನ ಅರಳ ಗ್ರಾಮದ ಮುಲಾರಪಟ್ಣ ಎಂಬಲ್ಲಿ ಫಲ್ಗುಣಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ತಹಸೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ಧಾಳಿ ನಡೆಸಿ, 9 ಲಾರಿಗಳನ್ನು ಶುಕ್ರವಾರ ವಶಪಡಿಸಿಕೊಂಡಿದ್ದಾರೆ.

ಸಹಾಯಕ ಕಮಿಷನರ್ ಡಾ. ಅಶೋಕ್ ಡಿ.ಆರ್. ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಬಂಟ್ವಾಳ ರೆವೆನ್ಯೂ ಇನ್ಸ್‌ಪೆಕ್ಟರ್ ಸಾಧು, ಗ್ರಾಮ ಲೆಕ್ಕಾಧಿಕಾರಿ ಜನಾರ್ದನ್, ನವೀನ್ ಟಿ., ಶಿವಾನಂದ ನಾಟೇಕಾರ್, ಯೋಗಾನಂದ, ಪ್ರವೀಣ್, ಸಿಬ್ಬಂದಿಗಳಾದ ಸಂದೀಪ್, ಗೋಪಾಲ, ತಿಲಕ್‌ರಾಜ್ ಮತ್ತಿತರಿದ್ದರು.

.


Spread the love

Exit mobile version