Home Mangalorean News Kannada News ಬಂಟ್ವಾಳ: ಖಾಸಗಿ ಬಸ್‌ಗಳ ಮೇಲೆ ಕಲ್ಲು ತೂರಾಟ

ಬಂಟ್ವಾಳ: ಖಾಸಗಿ ಬಸ್‌ಗಳ ಮೇಲೆ ಕಲ್ಲು ತೂರಾಟ

Spread the love

ಬಂಟ್ವಾಳ: ಖಾಸಗಿ ಬಸ್‌ಗಳ ಮೇಲೆ ಕಲ್ಲು ತೂರಾಟ

ಬಂಟ್ವಾಳ: ಕಳೆದ ರಾತ್ರಿಯಿಂದೀಚೆಗೆ ಬಂಟ್ವಾಳ ಮತ್ತು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ಖಾಸಗಿ ಬಸ್‌ಗಳ ಮೇಲೆ ಕಲ್ಲು ತೂರಾಟ ಘಟನೆಗಳು ನಡೆದಿವೆ.

ಘಟನೆಯಲ್ಲಿ ಬಸ್ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿವೆ. ಬಂಟ್ವಾಳದ ಭಂಡಾರಿಬೆಟ್ಟು, ಗಡಿಯಾರ ಸಮೀಪ ಸತ್ತಿಕಲ್ಲು ಎಂಬಲ್ಲಿ ಸೋಮವಾರ ರಾತ್ರಿ ಕಲ್ಲು ತೂರಾಟ ನಡೆದರೆ, ಮಂಗಳವಾರ ಬೆಳಗ್ಗೆ ವಿಟ್ಲ ಠಾಣಾ ವ್ಯಾಪ್ತಿಯ ಸೂರಿಕುಮೇರು, ಬಂಟ್ವಾಳ ಠಾಣಾ ವ್ಯಾಪ್ತಿಯ ಕುದ್ರೆಬೆಟ್ಟು ಎಂಬಲ್ಲಿ ಖಾಸಗಿ ಬಸ್ಸುಗಳ ಮೇಲೆ ಕಲ್ಲು ತೂರಲಾಗಿದೆ.

ಮಂಗಳೂರು ಕಡೆಯಿಂದ ಮಾಣಿ ಮೂಲಕ ಪುತ್ತೂರು ಕಡೆಗೆ ತೆರಳುವ ಸೆಲಿನಾ ಹಾಗೂ ಸೇಫ್‌ವೇ ಸೇರಿದಂತೆ ಮೂರು ಖಾಸಗಿ ಬಸ್ ಗಳ ಮೇಲೆ ಮಂಗಳವಾರ ಬೆಳಗ್ಗೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಬಸ್ ಗಳ ಗಾಜು ಸಂಪೂರ್ಣ ಧ್ವಂಸಗೊಂಡಿವೆ.

ಸೋಮವಾರ ರಾತ್ರಿಯಿಂದೀಚೆಗೆ ಒಟ್ಟು 6 ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವುದಾಗಿ ಮಾಹಿತಿ ಲಭಿಸಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿರುವುದಾಗಿ ದೂರಲಾಗಿದೆ.

ವಿಟ್ಲ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲುಗೊಂಡಿದ್ದು, ಹೆದ್ದಾರಿ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.

 ಘಟನೆಯಲ್ಲಿ ಬಸ್ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿವೆ. ಬಂಟ್ವಾಳದ ಭಂಡಾರಿಬೆಟ್ಟು, ಗಡಿಯಾರ ಸಮೀಪ ಸತ್ತಿಕಲ್ಲು ಎಂಬಲ್ಲಿ ಸೋಮವಾರ ರಾತ್ರಿ ಕಲ್ಲು ತೂರಾಟ ನಡೆದರೆ, ಮಂಗಳವಾರ ಬೆಳಗ್ಗೆ ವಿಟ್ಲ ಠಾಣಾ ವ್ಯಾಪ್ತಿಯ ಸೂರಿಕುಮೇರು, ಬಂಟ್ವಾಳ ಠಾಣಾ ವ್ಯಾಪ್ತಿಯ ಕುದ್ರೆಬೆಟ್ಟು ಎಂಬಲ್ಲಿ ಖಾಸಗಿ ಬಸ್ಸುಗಳ ಮೇಲೆ ಕಲ್ಲು ತೂರಲಾಗಿದೆ.

ಮಂಗಳೂರು ಕಡೆಯಿಂದ ಮಾಣಿ ಮೂಲಕ ಪುತ್ತೂರು ಕಡೆಗೆ ತೆರಳುವ ಸೆಲಿನಾ ಹಾಗೂ ಸೇಫ್‌ವೇ ಸೇರಿದಂತೆ ಮೂರು ಖಾಸಗಿ ಬಸ್ ಗಳ ಮೇಲೆ ಮಂಗಳವಾರ ಬೆಳಗ್ಗೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಬಸ್ ಗಳ ಗಾಜು ಸಂಪೂರ್ಣ ಧ್ವಂಸಗೊಂಡಿವೆ.

ಸೋಮವಾರ ರಾತ್ರಿಯಿಂದೀಚೆಗೆ ಒಟ್ಟು 6 ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವುದಾಗಿ ಮಾಹಿತಿ ಲಭಿಸಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿರುವುದಾಗಿ ದೂರಲಾಗಿದೆ. ವಿಟ್ಲ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲುಗೊಂಡಿದ್ದು, ಹೆದ್ದಾರಿ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.


Spread the love

Exit mobile version