ಬಸ್ಸು ಬೈಕ್ ಢಿಕ್ಕಿ: ಪೌರಕಾರ್ಮಿಕ ಸಾವು

Spread the love

ಬಸ್ಸು ಬೈಕ್ ಢಿಕ್ಕಿ: ಪೌರಕಾರ್ಮಿಕ ಸಾವು

ಕುಂದಾಪುರ: ಇಲ್ಲಿನ ಹಂಗಳೂರು ಬಳಿ ಗುರುವಾರ ರಾತ್ರಿ ಬಸ್ ಬೈಕ್ ಢಿಕ್ಕಿಯಾಗಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂದರ (39) ಮೃತರು. ತಂದೆ,ತಾಯಿಯನ್ನು ಅಗಲಿದ್ದಾರೆ.

ಇವರು ಕೋಟೇಶ್ವರ ಕಡೆಯಿಂದ ಬೈಕ್ ನಲ್ಲಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದಾಗ ಹೆದ್ದಾರಿಯಿಂದ ಖಾಸಗಿ ಬಸ್ ಡಿಪೋಗೆ ನುಗ್ಗುತ್ತಿದ್ದಾಗ ಢಿಕ್ಕಿಯಾಗಿದೆ. ಸ್ಥಳದಲ್ಲೇ ಸುಂದರ ಅವರು ಮೃತಪಟ್ಟಿದ್ದು ನೂರಾರು ಜನ ಜಮಾಯಿಸಿದರು. ವೃತ್ತ ನಿರೀಕ್ಷಕ ನಂದಕುಮಾರ್ ಸಹಿತ ಪೊಲೀಸರು ಘಟನ ಸ್ಥಳಕ್ಕೆ ತೆರಳಿದ್ದರು.

ಮೃತರು ಕಳೆದ 15 ವರ್ಷಗಳಿಂದ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದ ನಾಲ್ಕು ತಿಂಗಳ ಹಿಂದಷ್ಟೇ ಖಾಯಂ ನೇಮಕಾತಿ ಆದೇಶ ಪಡೆದಿದ್ದರು.


Spread the love