ಬೈಂದೂರು: ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Spread the love

ಬೈಂದೂರು: ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕುಂದಾಪುರ: ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಬೈಂದೂರು ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಬೈಂದೂರು ಠಾಣಾಧಿಕಾರಿ  ಅವರ ಮಾರ್ಗದರ್ಶನದಂತೆ ಠಾಣೆಯ ಸಿಬಂದಿ ಸುರೇಶ್ ಗದಗ ಕುಂದಾಪುರ ಪಿಸಿಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಸಿಸಿ ಸಂಖ್ಯೆ 523/23 ನೇದರಲ್ಲಿ ಕಳೆದ ಎಂಟು ವರ್ಷದಿಂದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯ ನಾವುಂದ ನಿವಾಸಿ ಪ್ರಭಾಕರ ಖಾರ್ವಿ (36) ಎಂಬಾತನನ್ನು ನಾವುಂದ ಗ್ರಾಮದ ಅರೆಹೊಳಿ ಕ್ರಾಸ್ ಬಳಿ ಬಂಧಿಸಿದ್ದಾರೆ,

ಬಂಧಿತ ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 50 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು ಆರೋಪಿಯನ್ನು ಉಡುಪಿ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಿದ್ದಾರೆ.


Spread the love