Home Mangalorean News Kannada News ಬೈಂದೂರು: ರಸ್ತೆ ಬದಿ ಮಲಗಿದ್ದ ಗೋವುಗಳನ್ನು ಕದ್ದೊಯ್ದ ಇಬ್ಬರ ಬಂಧನ

ಬೈಂದೂರು: ರಸ್ತೆ ಬದಿ ಮಲಗಿದ್ದ ಗೋವುಗಳನ್ನು ಕದ್ದೊಯ್ದ ಇಬ್ಬರ ಬಂಧನ

Spread the love

ಬೈಂದೂರು: ರಸ್ತೆ ಬದಿ ಮಲಗಿದ್ದ ಗೋವುಗಳನ್ನು ಕದ್ದೊಯ್ದ ಇಬ್ಬರ ಬಂಧನ

ಬೈಂದೂರು: ಪೊಲೀಸ್ ಠಾಣಾ ಸರಹದ್ದಿನ ಶೀರೂರು ಪೇಟೆಯ ಮಂಜುನಾಥ ಹೊಟೇಲ್ ಎದುರುಗಡೆ ಖಾಲಿ ಜಾಗದಲ್ಲಿ ಮಲಗಿದ್ದ ಗೋವುಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕುಂದಾಪುರ ಕೋಡಿ ಕಸಬಾ ನಿವಾಸಿಗಳಾದ ಅಬ್ದುಲ್ ಸಮಾದ್ (27) ಮತ್ತು ಅಬ್ದುಲ್ ರೆಹಮಾನ್ (25) ಎಂದು ಗುರುತಿಸಲಾಗಿದೆ.

ಜೂನ್ 7 ರಂದು ಶೀರೂರು ಪೇಟೆಯ ಮಂಜುನಾಥ ಹೊಟೇಲ್ ಎದುರುಗಡೆ ಖಾಲಿ ಜಾಗದಲ್ಲಿ ಮಲಗಿದ್ದ ಗೋವುಗಳನ್ನು ಕದ್ದೊಯ್ಯಲಾಗಿದೆ ಎಂದು ಶ್ರೀಧರ ಬಿಜೂರ್ ಎಂಬವರು ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಿಕೊಂಡ ತನಿಖೆ ಕೈಗೊಳ್ಳಲಾಗಿತ್ತು.

ತನಿಖೆ ಕೈಗೊಂಡ ಬೈಂದೂರು ಪೊಲೀಸರು ಜೂನ್ 22 ರಂದು ಆರೋಪಿಗಳನ್ನು ಹಾಲಾಡಿ ರಸ್ತೆಯ ಕೊಟೇಶ್ವರ ಸನ್ ರೈಸ್ ಫ್ಯಾಕ್ಟರಿ ಬಳಿ ವಶಕ್ಕೆ ಪಡೆದು ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸಿದ ಮಹೇಂದ್ರ XUV 500 ಕಾರು ಮತ್ತು Eco Sport Ford ಕಾರು, 2 ಮೊಬೈಲ್, ಕೃತ್ಯಕ್ಕೆ ಬಳಸಿದ ಚೂರಿಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 9 ಲಕ್ಷ ಆಗಿರುತ್ತದೆ.

ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಸಿದ್ದಲಿಂಗಪ್ಪ ಟಿ ಎಸ್, ಪರಮೇಶ್ವರ ಹೆಗಡೆ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರ ಮಾರ್ಗದರ್ಶನದಂತೆ ಬೆಳ್ಳಿಯಪ್ಪ ಕೆ. ಯು ಮಾನ್ಯ ಪೋಲೀಸ್ ಉಪಾಧೀಕ್ಷಕರು ಕುಂದಾಪುರ. ಹಾಗೂ ಸವಿತೃತೇಜ್ ಪಿ ಡಿ ಪೊಲೀಸ್ ವೃತ್ತ ನಿರೀಕ್ಷಕರು ಬೈಂದೂರು ರವರ ನಿರ್ದೇಶನದಂತೆ ತಿಮ್ಮೇಶ್ ಬಿನ್ ಪಿಎಸ್ ಐ ಕಾನೂನು ಸುವ್ಯವಸ್ಥೆ, ಸಿಬಂದಿಗಳಾದ ಪ್ರಿನ್ಸ್ ಕೆ ಜೆ, ಸುಜಿತ್ ಕುಮಾರ್, ಮಾಳಪ್ಪ ಭಾಗವಹಿಸಿದ್ದರು.


Spread the love

Exit mobile version