ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಸೋಮನಗೌಡ ಚೌಧರಿ ಆಯ್ಕೆ

Spread the love

ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಸೋಮನಗೌಡ ಚೌಧರಿ ಆಯ್ಕೆ

ಮಂಗಳೂರು: ಕೊರೋನ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವ ಸಂದರ್ಭ ಉತ್ತಮ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತರು ‘ದಿನದ ಕೊವಿಡ್ ವಾರಿಯರ್’ ಎಂದು ಗೌರವಿಸಲಿದ್ದಾರೆ.

ಅದರಂತೆ  ಬುಧವಾರ ಮಂಗಳೂರಿನ ಸಿ.ಏ.ಆರ್.ನ ಸೋಮನಗೌಡ ಚೌಧರಿ ಅವರನ್ನು ‘ವಾರಿಯರ್ ಆಫ್ ದಿ ಡೇ’ ಎಂದು ಗುರುತಿಸಲಾಗಿದೆ.

ವಿಜಯಪುರ ಮೂಲದ ಸೋಮನ ಗೌಡ ಅವರು ತುಳುನಾಡ ಪೊರ್ಲು ಸೇವಾ ಟ್ರಸ್ಟ್ ಮೂಲಕ ತನ್ನ ಸ್ವಂತ ಹಣದಿಂದ  21 ಬಡ ಕುಟುಂಬಗಳಿಗೆ ಅಕ್ಕಿ ಮತ್ತು ಅಗತ್ಯ ದಿನಸಿ ಸಾಮಾಗ್ರಿಗಳನ್ನು ಸ್ವತಃ ಅವರೇ ಮನೆ ಮನೆ ತೆರಳಿ ವಿತರಣೆ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.


Spread the love