ಮಕ್ಕಳ ದಿನಾಚರಣೆ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಹಾಗೂ ಶಿಕ್ಷಕರಿಗೆ ಸನ್ಮಾನ

Spread the love

ಮಕ್ಕಳ ದಿನಾಚರಣೆ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಹಾಗೂ ಶಿಕ್ಷಕರಿಗೆ ಸನ್ಮಾನ

ಕುಂದಾಪುರ: ಎಸ್.ಕೆ.ಪಿ.ಎ ದ.ಕ, ಉಡುಪಿ ಜಿಲ್ಲೆ- ಕುಂದಾಪುರ, ಬೈಂದೂರು ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಕೆ.ಎಸ್.ಎಸ್.ಸರಕಾರಿ ಪ್ರೌಢಶಾಲೆ ಹಕ್ಲಾಡಿಯಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಹಾಗೂ ಶಾಲಾ ಚಿತ್ರಕಲಾ ಶಿಕ್ಷಕರಾದ ರಾಜಶೇಖರ್ ಎಮ್.ತಾಳಿಕೋಟೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಕೆ.ಪಿ.ಎ ಕುಂದಾಪುರ, ಬೈಂದೂರು ವಲಯದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಉಪ್ಪುಂದ ವಹಿಸಿದ್ದರು.

ಈ ಸಂಧರ್ಭದಲ್ಲಿ ಕೆ.ಎಸ್.ಎಸ್. ಸರಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಡಾ.ಕಿಶೋರ್ ಶೆಟ್ಟಿ, ಎಸ್.ಕೆ.ಪಿ.ಎ ಕುಂದಾಪುರ, ಬೈಂದೂರು ಇದರ ನಿಕಟಪೂರ್ವ ಅಧ್ಯಕ್ಷರಾದ ದೊಟ್ಟಯ್ಯ ಪೂಜಾರಿ, ಎಸ್.ಕೆ.ಪಿ.ಎ ಕುಂದಾಪುರ, ಬೈಂದೂರು ಇದರ ಉಪಾಧ್ಯಕ್ಷರಾದ ಚಂದ್ರಕಾಂತ್, ಎಸ್.ಕೆ.ಪಿ.ಎ ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನ‌ಮಠ, ಕಾರ್ಯಕ್ರಮದ ಸಂಯೋಜಕರು, ವಲಯದ ಸದಸ್ಯರುಗಳಾದ ರಘುರಾಮ್, ಸಿ.ಜೆ,ವಿಶ್ವನಾಥ್ ಸುಮುಖ್, ಶಾಲಾ ಶಿಕ್ಷಕ ವೃಂದದವರು, ವಲಯದ ಸದಸ್ಯರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ದಿವಾಕರ್ ಶೆಟ್ಟಿ ಸ್ವಾಗತಿಸಿದರು, ಚಂದ್ರಕಾಂತ್ ವಂದಿಸಿದರು


Spread the love