ಮನೆಯಲ್ಲಿ ಬೆಂಕಿ ಅವಘಡ ; ಬಾರ್ ಮಾಲಿಕ ಮೃತ್ಯು, ಪತ್ನಿ ಗಂಭೀರ

Spread the love

ಮನೆಯಲ್ಲಿ ಬೆಂಕಿ ಅವಘಡ ; ಬಾರ್ ಮಾಲಿಕ ಮೃತ್ಯು, ಪತ್ನಿ ಗಂಭೀರ

ಉಡುಪಿ: ಮನೆಗೆ ಬೆಂಕಿ ತಗುಲಿದ ಪರಿಣಾಮ ಮಾಲಿಕ ಮೃತಪಟ್ಟು ಪತ್ನಿ ಗಂಭೀರ ಗಾಯಗೊಂಡ ಘಟನೆ ಅಂಬಲಪಾಡಿಯ ಗಾಂಧಿನಗರ ಎಂಬಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದೆ

ಮೃತಪಟ್ಟ ವರನ್ನು ಅಂಬಲಪಾಡಿಯ ಬಾರ್ ಉದ್ಯಮಿ ರಮಾನಂದ ಶೆಟ್ಟಿ (52) ಎಂದು ಗುರುತಿಸಲಾಗಿದೆ. ಪತ್ನಿ ಅಶ್ವಿನಿಯವರಿಗೆ ಗಂಭೀರ ಗಾಯವಾಗಿದ್ದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ


ಮನೆಯಲ್ಲಿ ರಮಾನಂದ ಶೆಟ್ಟಿ, ಪತ್ನಿ ಹಾಗೂ ಮಕ್ಕಳ ಸಹಿತ ನಾಲ್ವರು ಮಲಗಿದ್ದ ವೇಳೆ ಬೆಂಕಿ ಅವಘಡ ಉಂಟಾಗಿದೆ. ಬೆಂಕಿಯ ಹೊಗೆಯಿಂದ ರಮಾನಂದ ಶೆಟ್ಟಿ ದಂಪತಿ ಪ್ರಜ್ಞೆ ತಪ್ಪಿ ತೀವ್ರ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಕೂಡಲೇ ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ರಕ್ಷಿಸಿದ್ದು, ಇವರಲ್ಲಿ ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದ ದಂಪತಿಯನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ರಮಾನಂದ ಶೆಟ್ಟಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ

ಬೆಂಕಿ ನಂದಿಸುವ ಕಾರ್ಯಚರಣೆ ಮುಂದುವರಿದಿದ್ದು, ಅವಘಡದಿಂದ ಅಪಾರ ಸುತ್ತುಗಳು ಸುಟ್ಟು ಕರಕಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.


Spread the love