Home Mangalorean News Kannada News ಮೈಸೂರು | ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಹಲ್ಲೆಗೈದು ಕಾರನ್ನೇ ಕದ್ದೊಯ್ದ ದರೋಡೆಕೋರರು

ಮೈಸೂರು | ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಹಲ್ಲೆಗೈದು ಕಾರನ್ನೇ ಕದ್ದೊಯ್ದ ದರೋಡೆಕೋರರು

Spread the love

ಮೈಸೂರು | ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಹಲ್ಲೆಗೈದು ಕಾರನ್ನೇ ಕದ್ದೊಯ್ದ ದರೋಡೆಕೋರರು

ಮೈಸೂರು: ಬೀದರ್​​ನಲ್ಲಿ ಎಟಿಎಂಗೆ ಹಣ ತುಂಬಿಸುವವರ ಮೇಲೆ ಶೂಟೌಟ್, ಮಂಗಳೂರಿನ ಉಳ್ಳಾಲ ಕೋಟೆಕಾರು ಬ್ಯಾಂಕ್​ನಲ್ಲಿ ದರೋಡೆ ಬೆನ್ನಲ್ಲೇ ಮೈಸೂರಿನಲ್ಲಿಯೂ ಬೆಚ್ಚಿಬೀಳಿಸುವಂಥ ಕೃತ್ಯ ನಡೆದಿದೆ. ಹಗಲು ಹೊತ್ತಿನಲ್ಲೇ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ದುಷ್ಕರ್ಮಿಗಳು ಕಾರು ಸಮೇತ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ. ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.

ಕೇರಳ ಮೂಲದ ಉದ್ಯಮಿ ಸೂಫಿ ಎಂಬವರಿಗೆ ಸೇರಿದ ಇನ್ನೋವಾ ಕಾರು, ಹಣ ಎಗರಿಸಿಕೊಂಡು ಖದೀಮರು ಪರಾರಿಯಾಗಿದ್ದಾರೆ. ಎರಡು ಕಾರುಗಳಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿಗಳು ಉದ್ಯಮಿ ಸೂಫಿ ಅವರ ಕಾರು ಕಿತ್ತುಕೊಂಡ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಮೈಸೂರಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಡಿವೈಎಸ್‌ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಉದ್ಯಮಿ ಸೂಫಿಯಿಂದ ಜಯಪುರ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.


Spread the love

Exit mobile version