ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಪ್ರಶಾಂತ್ ಜತ್ತನ್ನ ನೇಮಕ

Spread the love

ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಪ್ರಶಾಂತ್ ಜತ್ತನ್ನ ನೇಮಕ

ಉಡುಪಿ: ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ನೂತನ ಸದಸ್ಯರಾಗಿ ಪ್ರಶಾಂತ್ ಜತ್ತನ್ನರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಕಾಪು ಶಾಸಕ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಶಿಫಾರಸ್ಸಿನಂತೆ ರಾಜ್ಯ ಸರಕಾರ ಜತ್ತನ್ನರನ್ನು ನೇಮಿಸಿದೆ.

ಪ್ರಶಾಂತ್ ಜತ್ತನ್ನ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ, ಕೋಟೆ ಸ್ಥಾನೀಯ ಕಾಂಗ್ರೆಸ್ ಸಮಿತಿ ಇದರ ಪದಾಧಿಕಾರಿಯಾಗಿ, ಕೋಟೆ ಗ್ರಾಮ ಪಂಚಾಯತಿನ ಅಧ್ಯಕ್ಷರಾಗಿ, ಅಂತರಾಷ್ಟ್ರೀಯ ಕ್ರೈಸ್ತ ಒಕ್ಕೂಟ ಇದರ ಪದಾಧಿಕಾರಿಯಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಪ್ರಶಾಂತ್ ಜತ್ತನ್ನ ಅವರೊಂದಿಗೆ, ಮಂಜುರೇಖಾ, ಎಸ್. ಡ್ಯಾನಿಯಲ್ ಕ್ರಿಸ್ಟೋಫರ್, ಜಾನ್ ವೆಸ್ಲಿ, ಬೀದರ್, ವಂ ಪ್ರಸಾದ್ ರಾವ್ ಬಳ್ಳಾರಿ ಇವರುಗಳನ್ನು ಕೂಡ ಸರಕಾರ ಸಮಿತಿಯ ಸದಸ್ಯರನ್ನಾಗಿ ನೇಮಿಸಿದೆ.


Spread the love