Home Mangalorean News Kannada News ಲಾರಿ ಚಾಲಕನ ದರೋಡೆ – ಆರೋಪಿ ಬಂಧನ

ಲಾರಿ ಚಾಲಕನ ದರೋಡೆ – ಆರೋಪಿ ಬಂಧನ

Spread the love

ಲಾರಿ ಚಾಲಕನ ದರೋಡೆ – ಆರೋಪಿ ಬಂಧನ

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿ ಯ ಗೋಳಿತ್ತೊಟ್ಟು ಎಂಬಲ್ಲಿ ಲಾರಿ ಚಾಲಕನ ಬಾಯಿಗೆ ಬಟ್ಟೆ ತುರುಕಿ ಕೈ ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಮಾರ್ಚ್ 25 ರಂದು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿ ಯ ಗೋಳಿತ್ತೊಟ್ಟು ಎಂಬಲ್ಲಿ ಲಾರಿ ಚಾಲಕನ ಬಾಯಿಗೆ ಬಟ್ಟೆ ತುರುಕಿ ಕೈ ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸ್ ತನಿಖಾ ತಂಡ ಮಹತ್ವದ ಯಶಸ್ಸು ಸಾಧಿಸಿ ದರೋಡೆ ಪ್ರಕರಣದ ಸತ್ಯಾಂಶ ಬಯಲು ಗೊಳಿಸಿದೆ. ಆರ್ಥಿಕ ಮುಗ್ಗಟ್ಟಿನಿಂದ ಪಾರಾಗಲು ಸ್ವತಃ ಲಾರಿ ಮಾಲಕ ಯಾ ಚಾಲಕನೇ ಮಾಡಿದ ದರೋಡೆ ನಾಟಕ ಎನ್ನುವುದು ಪತ್ತೆ ಯಾಗಿದೆ. ಒಂದು ಲಕ್ಷಕ್ಕೂ ಮಿಕ್ಕಿದ ಸೊತ್ತುಗಳನ್ನು ತಾನೇ ಕದ್ದು ಬಳಿಕ ತಾನೇ ತನ್ನ ಕೈ ಕಾಲುಗಳನ್ನು ಕಟ್ಟಿ ಹಾಕಿದಂತೆ ಮಾಡಿ ದರೋಡೆ ಕೋರರ ಕೃತ್ಯವೆಂದು ಬಿಂಬಿಸಿದ ಮಂಡ್ಯ ಪಾಂಡವಪುರದ ನಿವಾಸಿ ಅಂಬರೀಶನನ್ನು ಉಪ್ಪಿನಂಗಡಿ ಪೊಲೀಸ್ ತಂಡ ಬಂಧಿಸಿದೆ.

ಪ್ರೊಬೆಷನರಿ ಎ ಎಸ್ಪಿ ಪ್ರದೀಪ್ ಗುಂಟಿ, ಸಿ ಐ ಮಂಜುನಾಥ್, ಎಸ್ ಐ ನಂದ ಕುಮಾರ್ , ಪ್ರೊಬೆಷನರಿ ಎಸ್ ಐ ಪವನ್ ನಾಯಕ್ , ಎ ಎಸ್ ಐ ರುಕ್ಮಯ. ಸಿಬ್ಬಂದಿಗಳಾದ ಹರೀಶ್ಚಂದ್ರ .ಇರ್ಷಾದ್. ಜಗದೀಶ್ ಪತ್ತೆ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡಿದ್ದರು.


Spread the love

Exit mobile version