ವಿಧಾನ ಪರಿಷತ್ ಉಪಚುನಾವಣೆ: ಕಿಶೋರ್ ಕುಮಾರ್ ಮತ್ತು ರಾಜು ಪೂಜಾರಿ ಪರಸ್ಪರ ಮುಖಾಮುಖಿ

Spread the love

ವಿಧಾನ ಪರಿಷತ್ ಉಪಚುನಾವಣೆ: ಕಿಶೋರ್ ಕುಮಾರ್ ಮತ್ತು ರಾಜು ಪೂಜಾರಿ ಪರಸ್ಪರ ಮುಖಾಮುಖಿ

ಉಡುಪಿ: ದಸರಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಹಾಗೂ ಕಾಂಗ್ರೆಸ್ ಅಭ್ಯ ರ್ಥಿ ರಾಜು ಪೂಜಾರಿ ಪರಸ್ಪರ ಮುಖಾಮುಖಿಯಾದ ಪ್ರಸಂಗ ಭಾನುವಾರ ನಡೆಯಿತು.

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿ ದೇವರ ಆಶೀರ್ವಾದ ಪಡೆದು ಬಳಿಕ ಉಚ್ಚಿಲ ಮಹಾಲಕ್ಷ್ಮಿ ಕೋ-ಆಪರೇಟಿವ್ ಸೊಸೈಟಿ ವತಿಯಿಂದ, ಉಚ್ಚಿಲ ಮಹಾಲಕ್ಷಿ ದೇವಸ್ಥಾನದ ಸಹಯೋಗದೊಂದಿಗೆ ದಸರಾ ಮಹೋತ್ಸವದ ಅಂಗವಾಗಿ ನಡೆದ ಪೊಣ್ಣು ಪಿಲಿ ನಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದು ಇದೇ ವೇಳೆ ದೇವಸ್ಥಾನಕ್ಕೆ ಆಗಮಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಯವರು ಪರಸ್ಪರ ಮುಖಾಮುಖಿಯಾದರು.

ಈ ವೇಳೆ ಇಬ್ಬರೂ ಅಭ್ಯರ್ಥಿಗಳೂ ಕೂಡ ನಗುಮೊಗದಿಂದಲೇ ಪರಸ್ಪರ ಹಸ್ತಲಾಘವ ಮಾಡಿ ಕೊಂಡರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಉಪಸ್ಥೀತರಿದ್ದರು.


Spread the love
Subscribe
Notify of

0 Comments
Inline Feedbacks
View all comments