Home Mangalorean News Kannada News ಶೆಡ್ ನಲ್ಲಿ ಗಾಂಜಾ ಮಾರಾಟ –ಕುಂದಾಪುರ ಗ್ರಾಮಾಂತರ ಪೊಲೀಸರಿಂದ ಇಬ್ಬರ ಬಂಧನ

ಶೆಡ್ ನಲ್ಲಿ ಗಾಂಜಾ ಮಾರಾಟ –ಕುಂದಾಪುರ ಗ್ರಾಮಾಂತರ ಪೊಲೀಸರಿಂದ ಇಬ್ಬರ ಬಂಧನ

Spread the love

ಶೆಡ್ ನಲ್ಲಿ ಗಾಂಜಾ ಮಾರಾಟ –ಕುಂದಾಪುರ ಗ್ರಾಮಾಂತರ ಪೊಲೀಸರಿಂದ ಇಬ್ಬರ ಬಂಧನ

ಕುಂದಾಪುರ: ಶೆಡ್ ಒಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರುನ್ನು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಂಡ್ಲೂರು ನಿವಾಸಿಗಳಾದ ಕರಾಣಿ ಮಹಮ್ಮದ್ ನದೀಮ್(25), ಬೆಟ್ಟಿ ಮಹಮ್ಮದ್ ಅಫ್ಜಲ್ (28) ಎಂದು ಗುರುತಿಸಲಾಗಿದ್ದು, ದಾಳಿಯ ವೇಳೆ ರಯಾನ್ ಎಂಬಾತ ಪರಾರಿಯಾಗಿದ್ದಾನೆ.

ಅಗಸ್ಟ್ 20ರಂದು ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷರಾದ ರಾಜ್ ಕುಮಾರ್ ಅವರಿಗೆ ಜಪ್ತಿಗ್ರಾಮದ ಇಂಬಾಳಿಯ ಕೃಷ್ಣಯ್ಯ ಶೆಟ್ಟಿ ಎಂಬುವವರಿಗೆ ಸೇರಿದ ಶೆಡ್ಡಿನಲ್ಲಿ ಗಾಂಜಾ ಮಾರಾಟದ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಆರೋಪಿತರಾದ ಕರಾಣಿ ಮಹಮ್ಮದ್ ನದೀಮ್ ಹಾಗೂ ಬೆಟ್ಟಿ ಮಹಮ್ಮದ್ ಅಫ್ಜಲ್ ರನ್ನು ಬಂಧಿಸಿದ್ದು ಸ್ಥಳದಲ್ಲಿದ್ದ ಇನ್ನೊಬ್ಬ ಆರೋಪಿಯಾದ ರಯಾನನು ತಪ್ಪಿಸಿಕೊಂಡು ಓಡಿ ಹೋಗಿರುತ್ತಾನೆ

ಆರೋಪಿಗಳ ಬಳಿ ಇದ್ದ 360 ಗ್ರಾಂ ತೂಕದ ಗಾಂಜಾ (ಸುಮಾರು 8000/- ಮೌಲ್ಯ) ಹಾಗೂ ಎರಡು ದ್ವಿಚಕ್ರ ವಾಹನ ಹಾಗೂ ಎರಡು ಮೊಬೈಲನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version