Home Mangalorean News Kannada News ಸಂತೆಕಟ್ಟೆಯಲ್ಲಿ ಕಾರು – ಟೆಂಪೋ ನಡುವೆ ಡಿಕ್ಕಿ – ಇಬ್ಬರ ಸಾವು

ಸಂತೆಕಟ್ಟೆಯಲ್ಲಿ ಕಾರು – ಟೆಂಪೋ ನಡುವೆ ಡಿಕ್ಕಿ – ಇಬ್ಬರ ಸಾವು

Spread the love
RedditLinkedinYoutubeEmailFacebook MessengerTelegramWhatsapp

ಸಂತೆಕಟ್ಟೆಯಲ್ಲಿ ಕಾರು – ಟೆಂಪೋ ನಡುವೆ ಡಿಕ್ಕಿ – ಇಬ್ಬರ ಸಾವು

ಉಡುಪಿ: ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಶನಿವಾರ  ಬೆಳಗ್ಗೆ ಕಾರು ಹಾಗೂ ಗೂಡ್ಸ್ ಟೆಂಪೋ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗೂಡ್ಸ್ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟರೆ, ಕಾರು ಚಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಟೆಂಪೋ ಚಾಲಕ, ಉಡುಪಿ ಬೈಲೂರು ನಿವಾಸಿ ಸುಂದರ್ ಶೆಟ್ಟಿಗಾರ್ ಹಾಗೂ ಕಾರು ಚಾಲಕ ಅನೂಪ್ ಮೃತಪಟ್ಟವರು. ಅಪಘಾತದಲ್ಲಿ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿಯಿಂದ ಬ್ರಹ್ಮಾವರ ಕಡೆಗೆ ತೆರಳುತ್ತಿದ್ದ ಕಾರು ಸಂತೆಕಟ್ಟೆ ಕೆಜಿ ರೋಡ್ ತಲುಪುತ್ತಿದ್ದಂತೆ ಡಿವೈಡರ್ ಮೇಲೇರಿ, ಬ್ರಹ್ಮಾವರ ಕಡೆಯಿಂದ ಬರುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಹಾಗೂ ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಜಮಾಯಿಸಿದ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ್ರು. ಅಲ್ಲದೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ರು. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಉಡುಪಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕಾರು ಚಾಲಕನ ಅತೀ ವೇಗದ ಚಾಲನೆಯೇ ಅಪಘಾತ ಕಾರಣ ಎನ್ನಲಾಗಿದೆ.

ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version