Home Mangalorean News Kannada News ಹಿಟ್ ಆ್ಯಂಡ್ ರನ್: ಬೈಕಿಗೆ ಡಿಕ್ಕಿ ಹೊಡೆದ ಜೀಪ್, ಸವಾರ ಮೃತ್ಯು

ಹಿಟ್ ಆ್ಯಂಡ್ ರನ್: ಬೈಕಿಗೆ ಡಿಕ್ಕಿ ಹೊಡೆದ ಜೀಪ್, ಸವಾರ ಮೃತ್ಯು

Spread the love

ಹಿಟ್ ಆ್ಯಂಡ್ ರನ್: ಬೈಕಿಗೆ ಡಿಕ್ಕಿ ಹೊಡೆದ ಜೀಪ್, ಸವಾರ ಮೃತ್ಯು

ಕಾಂಗ್ರೆಸ್ ಮುಖಂಡನ ಪುತ್ರನ ಆಟಾಟೋಪಕ್ಕೆ ಆಮಾಯಕ ಬಲಿ!

ಶಿರ್ವ: ಜೀಪೊಂದು ಢಿಕ್ಕಿ ಹೊಡೆದ ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳಪುವಿನ ಮಿಲಿಟರಿ ಕಾಲೋನಿ ಎಂಬಲ್ಲಿ ನಡೆದಿದೆ.

ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸ ಲಾಗಿದೆ. ಇವರು ನ.13ರಂದು ಬೆಳಗಿನ ಜಾವ 5ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತದ ಬಳಿಕ ಚಾಲಕ ಪ್ರಜ್ವಲ್ ಶೆಟ್ಟಿ ಜೀಪನ್ನು ನಿಲ್ಲಿಸದೆ ಪರಾರಿಯಾಗಿದ್ದನು.

ಜೀಪು ಚಾಲಕ ಪ್ರಜ್ವಲ್ ಶೆಟ್ಟಿ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ ಪೊಲೀಸರು ಆರೋಪಿ ಪ್ರಜ್ವಲ್ ಶೆಟ್ಟಿ ಹಾಗೂ ಜೀಪವನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರಗಿಸಿರುವುದಾಗಿ ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಹುಸೇನ್ ಉಡುಪಿ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಹುಸೇನ್ ರಿಕ್ಷಾ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು.


Spread the love

Exit mobile version