Home Mangalorean News Kannada News ಅಂಬಲಪಾಡಿ ಉದ್ಯಮಿಯ ಮನೆಯಲ್ಲಿ ಬೆಂಕಿ ಅವಘಡ; ಪತ್ನಿಯೂ ಸಾವು

ಅಂಬಲಪಾಡಿ ಉದ್ಯಮಿಯ ಮನೆಯಲ್ಲಿ ಬೆಂಕಿ ಅವಘಡ; ಪತ್ನಿಯೂ ಸಾವು

Spread the love
RedditLinkedinYoutubeEmailFacebook MessengerTelegramWhatsapp

ಅಂಬಲಪಾಡಿ ಉದ್ಯಮಿಯ ಮನೆಯಲ್ಲಿ ಬೆಂಕಿ ಅವಘಡ; ಪತ್ನಿಯೂ ಸಾವು

ಉಡುಪಿ: ಅಂಬಲಪಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಬಾರ್ & ರೆಸ್ಟೋರೆಂಟ್ ಉದ್ಯಮಿ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಅಶ್ವಿನಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.

ಸೋಮವಾರ ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಸಿಲುಕಿದ ಬಾರ್ ಮಾಲಕ ರಮಾನಂದ ಹಾಗು ಪತ್ನಿ ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ರಮಾನಂದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಬೆಂಕಿ ಅವಘಡದ ವೇಳೆ ಹೊಗೆಯಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಪತ್ನಿ ಅಶ್ವಿನಿ ಕೂಡ ಮಂಗಳವಾರ ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮಕ್ಕಳಿಬ್ಬರು ಮನೆಯ ಮೇಲಿನ ಮಹಡಿಯಲ್ಲಿದ್ದ ಪರಿಣಾಮ ಅಪಾಯದಿಂದ ಪಾರಾಗಿದ್ದು, ಘಟನೆಯಿಂದ ಮನೆ ಸುಟ್ಟು ಕರಕಲಾಗಿದೆ.


Spread the love

Exit mobile version