Home Mangalorean News Kannada News ಅಡ್ಯಾರ್ ಬಳಿ ಟಯರ್ ಸಿಡಿದು ಬಸ್ಸು ಪಲ್ಟಿ 16 ಮಂದಿ ಪ್ರಯಾಣಿಕರಿಗೆ ಗಾಯ

ಅಡ್ಯಾರ್ ಬಳಿ ಟಯರ್ ಸಿಡಿದು ಬಸ್ಸು ಪಲ್ಟಿ 16 ಮಂದಿ ಪ್ರಯಾಣಿಕರಿಗೆ ಗಾಯ

Spread the love

ಅಡ್ಯಾರ್ ಬಳಿ ಟಯರ್ ಸಿಡಿದು ಬಸ್ಸು ಪಲ್ಟಿ 16 ಮಂದಿ ಪ್ರಯಾಣಿಕರಿಗೆ ಗಾಯ

ಬಂಟ್ವಾಳ : ಚಲಿಸುತ್ತಿದ್ದ ವೇಳೆ ಟಯರ್ ಸಿಡಿದ ಪರಿಣಾಮ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದು ಮಗುಚಿಬಿದ್ದ ಘಟನೆಅಡ್ಯಾರ್-ಅರ್ಕುಳ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ   ಬೆಳಗ್ಗೆ ನಡೆದಿದೆ.

ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಅರ್ಕುಳ ಬಳಿ ತಲುಪಿದಾಗ ಅದರ ಟಯರ್ ಸಿಡಿದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಕಾರಿನ ಮೇಲೆಯೇ ಉರುಳಿಬಿದ್ದಿದೆ. ಇದರಿಂದ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ ಹಲವರಿಗೆ ಗಾಯಗಳಾಗಿವೆ.

ಅಪಘಾತದಿಂದ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದ್ದು, ಬಸ್ ಕೂಡಾ ಜಖಂಗೊಂಡಿದೆ.

ಘಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.ಗಾಯಾಳುಗಳನ್ನು ಸ್ಥಳೀಯ ಹಾಗೂ ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.


Spread the love

Exit mobile version