Home Mangalorean News Kannada News ಅಪರಾಧಿ ಚಟುವಟಿಕೆ ಬಿಟ್ಟು ಕಾನೂನು ಗೌರವಿಸಿ – ರೌಡಿಗಳಿಗೆ ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ

ಅಪರಾಧಿ ಚಟುವಟಿಕೆ ಬಿಟ್ಟು ಕಾನೂನು ಗೌರವಿಸಿ – ರೌಡಿಗಳಿಗೆ ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ

Spread the love

ಅಪರಾಧಿ ಚಟುವಟಿಕೆ ಬಿಟ್ಟು ಕಾನೂನು ಗೌರವಿಸಿ – ರೌಡಿಗಳಿಗೆ ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ

ಮಂಗಳೂರು: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ನಗರದ ಎಲ್ಲಾ ಪೊಲೀಸ್ ಠಾಣೆಗಳ ಸಕ್ರೀಯ ರೌಡಿಗಳ ಪರೇಡ್ನ್ನು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರು ನಡೆಸಿದರು.


ಈ ಪರೇಡ್ನಲ್ಲಿ ಒಟ್ಟು 262 ಸಕ್ರೀಯ ರೌಡಿಗಳನ್ನು ಸಂಬಂಧಪಟ್ಟ ಎ.ಸಿ.ಪಿರವರು ಪೊಲೀಸ್ ಆಯುಕ್ತರ ಮುಂದೆ ಹಾಜರುಪಡಿಸಿರುತ್ತಾರೆ.
ಎಲ್ಲಾ ರೌಡಿಗಳಿಗೆ ತಮ್ಮ ಅಪರಾಧಿಕ ಚಟುವಟಿಕೆಗಳನ್ನು ಬಿಟ್ಟು ಕಾನೂನನ್ನು ಗೌರವಿಸುವ ಪ್ರಜೆಗಳಾಗಬೇಕೆಂದು ಪೊಲೀಸ್ ಆಯುಕ್ತರು ಉಪದೇಶಿಸಿದರು ಇದಲ್ಲದೇ ಸದ್ರಿ ರೌಡಿಗಳಿಗೆ ಇನ್ನು ಮುಂದೆ ಯಾವುದಾದರೂ ಅಪಾರಾಧಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅವರ ಮೇಲೆ ಸೂಕ್ತ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳಲಾಗುವುದೆಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದರು.
ಈ ಪರೇಡ್ನಲ್ಲಿ ಸಿದ್ದಾರ್ಥ ಗೋಯಲ್ ಐ.ಪಿ.ಎಸ್ ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ, ಬಿಪಿ ದಿನೇಶ್ ಕುಮಾರ್ ಡಿಸಿಪಿ ಅಪರಾಧ ಮತ್ತು ಸಂಚಾರ, ನಗರದ ಎಲ್ಲಾ ಎಸಿಪಿರವರು ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಉಪಸ್ಥಿತರಿದ್ದರು.


Spread the love

Exit mobile version