ಇಂದು (ಮಾ.6) ಪಾಕಿಸ್ತಾನ ಪರ ಘೋಷಣೆ, ಬೆಂಗಳೂರು ಬಾಂಬ್ ಸ್ಪೋಟ ವಿರುದ್ದ ಪ್ರತಿಭಟನೆ

Spread the love

ಇಂದು (ಮಾ.6) ಪಾಕಿಸ್ತಾನ ಪರ ಘೋಷಣೆ, ಬೆಂಗಳೂರು ಬಾಂಬ್ ಸ್ಪೋಟ ವಿರುದ್ದ ಪ್ರತಿಭಟನೆ

ಉಡುಪಿ: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದೇಶ ವಿರೋಧಿ ಹಾಗೂ ಭಯೋತ್ಪಾದಕ ವಿಧ್ವಂಸಕ ಕೃತ್ಯಗಳಿಂದ ಜನಸಾಮಾನ್ಯರಲ್ಲಿ ಭಯದ ಮತ್ತು ದೇಶದ ಆಂತರಿಕ ಭದ್ರತೆಯ ಬಗ್ಗೆ ಹಲವಾರು ಪ್ರಶ್ನೆಗಳು ಹಾಗೂ ಗೊಂದಲಗಳು ರಾಜ್ಯ ಸರ್ಕಾರದ ಅಸಮರ್ಪಕ ಆಡಳಿತದಿಂದ ಮೂಡುತ್ತಿದ್ದು, ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಮತ್ತು ಬೆಂಗಳೂರಿನ ವಿಧಾನಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆಯನ್ನು ಖಂಡಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ಆಯೋಜನೆಗೊಂಡಿದೆ.

ಭಯೋತ್ಪಾದಕ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಯಲಿರುವ ಈ ಹೋರಾಟವು ರಾಜ್ಯದಲ್ಲಿ ಕುಸಿಯುತ್ತಿರುವ ಆಂತರಿಕ ಸುರಕ್ಷತೆಯ ಬಗ್ಗೆ ಸರಕಾರವನ್ನು ಎಚ್ಚರಿಸಲಿದೆ

ಇಂದು ದಿನಾಂಕ 06-03-2024 ರಂದು ಬುಧವಾರ ಸಂಜೆ 3:30ಕ್ಕೆ ಉಡುಪಿ ನಗರದ ಅಜ್ಜರಕಾಡು ಪಾರ್ಕ್ ಬಳಿಯ ಹುತಾತ್ಮ ಸೈನಿಕರ ಯುದ್ಧ ಸ್ಮಾರಕ ದ ಬಳಿ ಈ ಪ್ರತಿಭಟನೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಲಿದ್ದಾರೆ. ಮತ್ತು ಸಮಾಜದ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಈ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಮಿತಿಯ ಜಿಲ್ಲಾ ಕಾರ್ಯದರ್ಶಿ ಶ್ರೀ ಸಂತೋಷ್ ಅಮೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .


Spread the love