Home Mangalorean News Kannada News ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ; ಬೆಳ್ತಂಗಡಿಯ ಯುವ ಉದ್ಯಮಿ ಮೃತ್ಯು

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ; ಬೆಳ್ತಂಗಡಿಯ ಯುವ ಉದ್ಯಮಿ ಮೃತ್ಯು

Spread the love

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ; ಬೆಳ್ತಂಗಡಿಯ ಯುವ ಉದ್ಯಮಿ ಮೃತ್ಯು

ಮಂಗಳೂರು: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವ ಉದ್ಯಮಿಯೋರ್ವರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗಿನ ಜಾವ ಉಜಿರೆಯಲ್ಲಿ ನಡೆದಿದೆ.

ಮೃತರನ್ನು ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಎಂದು ಗುರುತಿಸಲಾಗಿದೆ.

ಶನಿವಾರ ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ.ಢಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.

ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು.


Spread the love

Exit mobile version