ಉಡುಪಿ ಚರ್ಚ್, ಬಿಷಪ್ ಹೌಸ್ ಗೆ ಇಂಧನ ಸಚಿವ ಕೆ ಜೆ ಜಾರ್ಜ್ ಭೇಟಿ

Spread the love

ಉಡುಪಿ ಚರ್ಚ್, ಬಿಷಪ್ ಹೌಸ್ ಗೆ ಇಂಧನ ಸಚಿವ ಕೆ ಜೆ ಜಾರ್ಜ್ ಭೇಟಿ

ಉಡುಪಿ: ಕರ್ನಾಟಕ ರಾಜ್ಯ ಸರಕಾರದ ಇಂಧನ ಸಚಿವರಾದ ಕೆ ಜೆ ಜಾರ್ಜ್ ಅವರು ಮಂಗಳವಾರ ಉಡುಪಿ ಬಿಷಪ್ ಹೌಸ್ ಮತ್ತು ಶೋಕ ಮಾತಾ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಉಡುಪಿ ಧರ್ಮಾಧ್ಯಕ್ಷರ ಅನುಪಸ್ಥಿತಿಯಲ್ಲಿ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಸಚಿವರನ್ನು ಧರ್ಮಪ್ರಾಂತ್ಯದ ಪರವಾಗಿ ಗೌರವಿಸಿದರು. ಈ ವೇಳೆ ಸಚಿವರು ಧರ್ಮಪ್ರಾಂತ್ಯ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡರಲ್ಲದೆ ಹಾಗೂ ಕ್ರೈಸ್ತ ಸಮುದಾಯದ ಅಭಿವೃಧ್ದಿಗೆ ಸರಕಾರದ ಯೋಜನೆಗಳನ್ನು ಉಪಯೋಗಿಸಿಕೊಳ್ಳುವಂತೆ ಸೂಚಿಸಿದರು

ಈ ವೇಳೆ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ, ಮಣಿಪಾಲ ಕ್ರೈಸ್ಟ್ ಚರ್ಚಿನ ಧರ್ಮಗುರು ವಂ|ರೋಮಿಯೊ ಲೂವಿಸ್, ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ನಿರ್ದೇಶಕರಾದ ವಂ|ಆಲ್ಬನ್ ಡಿಸೋಜಾ, ತರಬೇತಿ ನೀರತ ಗುರು ವಂ ಸ್ಟೀಫನ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯದರ್ಶಿ ಎಮ್ ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ ಹಾಗೂ ಇತರರು ಉಪಸ್ಥಿತರಿದ್ದರು.


Spread the love