ಉಡುಪಿ ಜಿಲ್ಲಾಧಿಕಾರಿಗಳ ಹತ್ಯೆ ಯತ್ನ ಕ್ಯಾಪ್ಟನ್ ಕಾರ್ಣಿಕ್ ಖಂಡನೆ

Spread the love

ಉಡುಪಿ ಜಿಲ್ಲಾಧಿಕಾರಿಗಳ ಹತ್ಯೆ ಯತ್ನ ಕ್ಯಾಪ್ಟನ್ ಕಾರ್ಣಿಕ್ ಖಂಡನೆ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಹಾಗೂ ಕುಂದಾಪುರದ ಸಹಾಯಕ ಕಮಿಷನರ್ ಮತ್ತಿತರರ ಮೇಲೆ ಮರಳು ಮಾಫಿಯಾ ನಡೆಸಿದ ಕೊಲೆ ಯತ್ನವನ್ನು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ತೀವ್ರವಾಗಿ ಖಂಡಿಸಿದ್ದಾರೆ.

ಕಾಂಗ್ರೇಸ್ ಸರ್ಕಾರ ಮಾಫಿಯಾಗಳಿಗೆ ನೀಡಿದ ಕುಮ್ಮಕ್ಕೆ ಇಂದು ಮಾಫಿಯಾಗಳು ಜಿಲ್ಲಾಧಿಕಾರಿಗಳ ಕೊಲೆ ಯತ್ನ ಮಾಡುವಷ್ಟು ಮಟ್ಟಕ್ಕೆ ಬೆಳೆದಿವೆ. ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆಯ ಪಾಲನೆಯಲ್ಲಿ ಕಾಂಗ್ರೇಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ದಕ್ಷ ಅಧಿಕಾರಿಗಳ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೂಡಲೆ ಎಚ್ಚೆತ್ತುಕೊಂಡು ಕರಾವಳಿಯ ಮರಳು ಮಾಫಿಯಾಕ್ಕೆ ಸಹಕಾರ ನೀಡುತ್ತಿರುವವರನ್ನು ಪತ್ತೆ ಹಚ್ಚಿ ಮಟ್ಟ ಹಾಕುವ ಮೂಲಕ ದಕ್ಷ ಅಧಿಕಾರಿಗಳ ಮನೋಸ್ಥೈರ್ಯವನ್ನು ಹೆಚ್ಚಿಸುವುದು ಅಗತ್ಯವಾಗಿದೆ.


Spread the love