Home Mangalorean News Kannada News ಉಡುಪಿ: ಜೈಲಿನಲ್ಲಿ ಹೃದಯಾಘಾತ, ವಿಚಾರಣಾಧೀನ ಕೈದಿ ಸಾವು

ಉಡುಪಿ: ಜೈಲಿನಲ್ಲಿ ಹೃದಯಾಘಾತ, ವಿಚಾರಣಾಧೀನ ಕೈದಿ ಸಾವು

Spread the love

ಉಡುಪಿ: ಜೈಲಿನಲ್ಲಿ ಹೃದಯಾಘಾತ, ವಿಚಾರಣಾಧೀನ ಕೈದಿ ಸಾವು

ಉಡುಪಿ: ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕ ಸಬ್ ಜೈಲಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಅನುಪ್ ಶೆಟ್ಟಿ(38)ಎಂದು ಗುರುತಿಸಲಾಗಿದೆ.

ಕುಂದಾಪುರದ ಫೈನಾನ್ಶಿಯರ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಅನೂಪ್ ಶೆಟ್ಟಿ ಕಳೆದ ಎರಡೂವರೆ ವರ್ಷಗಳಿಂದ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದ. ಶನಿವಾರ ಸಂಜೆ ವೇಳೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು ಮಾಹಿತಿ ತಿಳಿದ ತಕ್ಷಣ ಸಿಬ್ಬಂದಿ ಆಸ್ಪತ್ರೆ ರವಾನಿಸಿದ್ದರು. ಆದರೆ ಆಸ್ಪತ್ರೆಗೆ ದಾಖಲಾಗುವ ಮೊದಲೇ ಕೊನೆಯುಸಿರು ಎಳೆದಿದ್ದಾರೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.


Spread the love

Exit mobile version