ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಜನಾರ್ದನ ಭಂಡಾರ್ಕಾರ್  ಆಯ್ಕೆ

Spread the love

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಜನಾರ್ದನ ಭಂಡಾರ್ಕಾರ್  ಆಯ್ಕೆ

ಉಡುಪಿ: ಮುಂಬರುವ 2018ರ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಅಂಗವಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್‍ನ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ದಿನೇಶ್ ಪುತ್ರನ್‍ರವರ ಶಿಫಾರಸಿನ ಮೇರೆಗೆ ಜನಾರ್ದನ ಭಂಡಾರ್ಕಾರ್ ಅವರನ್ನು, ಕೆ.ಪಿ.ಸಿ.ಸಿ. ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‍ರವರು ನೇಮಕ ಮಾಡಿದ್ದಾರೆ.

ಭಂಡಾರ್ಕಾರ್ ಅವರು ಉಡುಪಿ ಬ್ಲಾಕ್ ಯುವ ಕಾಂಗ್ರೆಸ್‍ನ ಜೊತೆಕಾರ್ಯದರ್ಶಿಯಾಗಿ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ (ಉತ್ತರ ವಲಯ)ಯ ಪ್ರಧಾನ ಕಾರ್ಯದಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಉಡುಪಿ ಬ್ಲಾಕ್‍ನ ಪ್ರಧಾನ ಕಾರ್ಯದರ್ಶಿಯಾಗಿ, ಉಡುಪಿ ವಿಧಾನಸಭಾ ಕ್ಷೇತ್ರದ ಬಿ.ಎಲ್.ಎ.1, ಉಡುಪಿ ನಗರಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಶ್ರೀಯುತರು ಸನ್ನಿ ಕ್ರಿಕೆಟ್ ಸಂಸ್ಥೆಯ ವ್ಯವಸ್ಥಾಪಕರಾಗಿದ್ದರು. ಉಡುಪಿ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾಗಿದ್ದರು. ರಥಬೀದಿ ಭಕ್ತ ವೃಂದ ಮತ್ತು ರಿಕ್ಷಾ ಚಾಲಕರ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ.


Spread the love