Home Mangalorean News Kannada News ಉಡುಪಿ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿ ಡಿಕ್ಕಿ ಗಂಭೀರ ಗಾಯ

ಉಡುಪಿ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿ ಡಿಕ್ಕಿ ಗಂಭೀರ ಗಾಯ

Spread the love

ಉಡುಪಿ: ರಸ್ತೆ ದಾಟುತ್ತಿದ್ದ ಪಾದಚಾರಿರೊಬ್ಬರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಲಾರಿಯ ಹಿಂದಿನ ಚಕ್ರ, ಪಾದಚಾರಿಯ ಬಲ ಕೈ ಮೇಲೆ ಹರಿದು ಗಂಭೀರ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಆಂಧ್ರ ಪ್ರದೇಶದ ಪಗಿನ ಎಂಬಲ್ಲಿನ ವಾಸಿ ತಿಮ್ಮಯ್ಯ(48) ಬಲಗೈಗೆ ಗಂಭೀರ ಗಾಯಗೊಂಡು ಉಡುಪಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನವಯುಗ ರಸ್ತೆ ನಿರ್ಮಾಣ ಕಂಪೆನಿಯ ಗುತ್ತಿಗೆ ಕಾರ್ಮಿಕನಾಗಿದ್ದ ತಿಮ್ಮಯ್ಯನು, ಬುಧವಾರ ರಜೆ ಕಾರಣ ಉಚ್ಚಿಲ ಪೇಟೆಗೆ ಬಂದು ವಿಪರೀತ ಮದ್ಯ ಸೇವಿಸಿ ಹೆದ್ದಾರಿ ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಕಲ್ಲಿಕೋಟೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿತ್ತು.

ಈ ಸಂದರ್ಭ ಆಯ ತಪ್ಪಿ ಬಿದ್ದು ತಿಮ್ಮಯ್ಯನ ಬಲಗೈ ಮೇಲೆ ಲಾರಿ ಹರಿದು ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುವನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು,  ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

Exit mobile version