ಉಡುಪಿ: ಸೆ.15ರಂದು ಮಾನವ ಸರಪಳಿ: ರಾ.ಹೆದ್ದಾರಿಯಲ್ಲಿ ಏಕಮುಖ ಸಂಚಾರ

Spread the love

ಉಡುಪಿ: ಸೆ.15ರಂದು ಮಾನವ ಸರಪಳಿ: ರಾ.ಹೆದ್ದಾರಿಯಲ್ಲಿ ಏಕಮುಖ ಸಂಚಾರ

ಉಡುಪಿ: ಅಂತರ್ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಸೆ.15ರ ರವಿವಾರ ಬೆಳಗ್ಗೆ 9:30ರಿಂದ 10:30ರವರೆಗೆ ಜಿಲ್ಲೆಯ ಗಡಿಭಾಗ ಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆವರೆಗಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು 107 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದರ ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ಉಡುಪಿಯ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಆಯೋಜಿಸಲಾ ಗಿದ್ದು, ತಾಲೂಕು ಮಟ್ಟದಲ್ಲಿ ಮರವಂತೆ, ಕುಂದಾಪುರ, ಬ್ರಹ್ಮಾವರ ಹಾಗೂ ಉಚ್ಚಿಲದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮ ವಿವರ: ರವಿವಾರ ಬೆಳಗ್ಗೆ 9:30ರಿಂದ 9:37ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲುವುದು, 9:37ರಿಂದ 9:40 ರವರೆಗೆ ನಾಡಗೀತೆ, 9:40ರಿಂದ 9:55ರವರೆಗೆ ಮುಖ್ಯ ಅತಿಥಿಗಳ ಭಾಷಣ, 9:55ರಿಂದ 9:57ರವರೆಗೆ ಸಂವಿಧಾನದ ಪೀಠಿಕೆಯ ವಾಚನ, 9:57ರಿಂದ 9:59 ರವರೆಗೆ ಮಾನವ ಸರಪಳಿಗೆ ಕೈ ಹಿಡಿದು ನಿಲ್ಲುವುದು, 10:00 ಗಂಟೆಗೆ ಎರಡು ಕೈಯಗಳನ್ನು ಮೇಲೆತ್ತಿ ಜೈಹಿಂದ್ .. ಜೈ ಕರ್ನಾಟಕ.. ಘೋಷಣೆ ಕೂಗುವು ದರೊಂದಿಗೆ ಮಾನವ ಸರಪಳಿ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ. ಅನಂತರ ಸಿಹಿತಿಂಡಿ ವಿತರಣೆ ನಡೆಯಲಿದೆ.

ಅನಂತರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ. ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಚಿತ್ರ ಶಿರ್ಷಿಕೆ ಪ್ರದರ್ಶನ ಸಹ ನಡೆಯಲಿದೆ. ರಾಷ್ಟ್ರ ಧ್ವಜ ಹಾಗೂ ಕರ್ನಾಟಕ ರಾಜ್ಯದ ಧ್ವಜಗಳನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಗುವುದು.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸರಕಾರಿ ಹಾಗೂ ಸರಕಾ ರೇತರ ಸಂಘ ಸಂಸ್ಥೆಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳು, ವಿಕಲಚೇತನರು ಸೇರಿದಂತೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ.

ಏಕಮುಖ ಸಂಚಾರ: ಮಾನವ ಸರಪಳಿಯು ಹೆದ್ದಾರಿಯಲ್ಲಿ ನಡೆಯಲಿರುವುದರಿಂದ ನಾಳೆ ಬೆಳಗ್ಗೆ 8:30ರಿಂದ 10:30 ರವರೆಗೆ ಏಕಮುಖ ಸಂಚಾರ ಇರುತ್ತದೆ. ಹೆದ್ದಾರಿಯ ಎಡ ಭಾಗದಲ್ಲಿ (ಬೈಂದೂರು ನಿಂದ ಹೆಜಮಾಡಿ ಹೋಗುವಾಗ) ವಾಹನಗಳಿಗೆ ಅವಕಾಶ ಮಾಡಿ ಕೊಡಲಾಗಿದೆ. ಬಲಭಾಗದಲ್ಲಿ (ಸಮುದ್ರದ ಕಡೆಯಲ್ಲಿ) ಮಾನವ ಸರಪಳಿ ಇರುತ್ತದೆ.

ಈ ಸಂದರ್ಭ ಮಾರ್ಗದಲ್ಲಿ ಸಂಚರಿಸುವ ವಾಹನ ಚಾಲಕರು ನಿಧಾನಗತಿಯಲ್ಲಿ ವಾಹನಗಳನ್ನು ಚಲಾಯಿಸಿ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments