Home Mangalorean News Kannada News ಉಡುಪಿ: ಹಿರಿಯ ಬಿಜೆಪಿ ಮುಖಂಡ ಹೊಟೇಲ್ ಉದ್ಯಮಿ ಬಿ. ಸುಧಾಕರ ಶೆಟ್ಟಿ ನಿಧನ

ಉಡುಪಿ: ಹಿರಿಯ ಬಿಜೆಪಿ ಮುಖಂಡ ಹೊಟೇಲ್ ಉದ್ಯಮಿ ಬಿ. ಸುಧಾಕರ ಶೆಟ್ಟಿ ನಿಧನ

Spread the love

ಉಡುಪಿ: ಹಿರಿಯ ಬಿಜೆಪಿ ಮುಖಂಡ ಹೊಟೇಲ್ ಉದ್ಯಮಿ ಬಿ. ಸುಧಾಕರ ಶೆಟ್ಟಿ ನಿಧನ

ಉಡುಪಿ: ಹಿರಿಯ ಬಿಜೆಪಿ ಮುಖಂಡ ಹೊಟೇಲ್ ಉದ್ಯಮಿ ಬಿ. ಸುಧಾಕರ ಶೆಟ್ಟಿ ಗುರುವಾರ ಬೆಳಿಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದ ಸುಧಾಕರ್ ಶೆಟ್ಟಿ 2009 ರಿಂದ 12 ರ ವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು 1999ರಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಯು ಆರ್ ಸಭಾಪತಿ ವಿರುದ್ದ ಸೋಲು ಕಂಡಿದ್ದರು.

2004ರ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಲಭಿಸದ ಹಿನ್ನಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಸಿದ್ದರು. ಬಳಿ 2013 ರ ಚುನಾವಣೆಯಲ್ಲಿ ಹಾಲಿ ಶಾಸಕರಾಗಿದ್ದ ರಘುಪತಿ ಭಟ್ ಅವರ ಸಿಡಿ ಗದ್ದಲದಿಂದ ಸ್ಪರ್ಧಿಸಲು ಹಿಂದೆ ಸರಿದ ಹಿನ್ನಲೆಯಲ್ಲಿ ಸುಧಾಕರ್ ಶೆಟ್ಟಿ ಕಣಕ್ಕಿಳಿದಿದ್ದರು. ಆದರೆ ಪ್ರಮೋದ್ ಮಧ್ವರಾಜ್ ವಿರುದ್ದ ಸೋಲು ಅನುಭವಿಸಿದ್ದರು.


Spread the love

Exit mobile version