ಕಾಂಗ್ರೆಸ್​​​ಗೆ ಕೈಕೊಟ್ಟ ಜಗದೀಶ್​ ಶೆಟ್ಟರ್​​ ಮಾತೃಪಕ್ಷ ಬಿಜೆಪಿಗೆ ಘರ್ ​ವಾಪಸಿ

Spread the love

ಕಾಂಗ್ರೆಸ್​​​ಗೆ ಕೈಕೊಟ್ಟ ಜಗದೀಶ್​ ಶೆಟ್ಟರ್​​ ಮಾತೃಪಕ್ಷ ಬಿಜೆಪಿಗೆ ಘರ್ ​ವಾಪಸಿ

ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್  ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.

ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್
ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.


Spread the love