ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಮೋದ್ ಸುವರ್ಣ ಕಟಪಾಡಿ ಆಯ್ಕೆ

Spread the love

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಮೋದ್ ಸುವರ್ಣ ಕಟಪಾಡಿ ಆಯ್ಕೆ

ಉಡುಪಿ: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನಮ್ಮ ಕುಡ್ಲ ವಾಹಿನಿ ಇದರ ಉಡುಪಿ ಜಿಲ್ಲಾ ವರದಿಗಾರ ಪ್ರಮೋದ್ ಸುವರ್ಣ ಕಟಪಾಡಿ ಅವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ.

ಮಂಗಳವಾರ ನಡೆದ ಕಾಪು ಪ್ರೆಸ್ ಕ್ಲಬ್ ಇದರಲ್ಲಿ ನಡೆದ ಮಹಾಸಭೆಯಲ್ಲಿ ಪದಾಧಿಕಾರಿಗಳ ಚುನಾವಣೆ ನಡೆಯಿತು. ಚುನಾವಣಾಧಿಕಾರಿಗಳಾಗಿ ಚುನಾವಣಾಧಿಕಾರಿಗಳಾಗಿ ಉಡುಪಿ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಪಾಡೇಲು ಮತ್ತು ಪ್ರಧಾನ ಕಾರ್ಯದರ್ಶಿ ಸಂತೋಷ ಸರಳಬೆಟ್ಟು ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಪ್ರಮೋದ್ ಸುವರ್ಣ ಅವರು ಛಾಯಾಗ್ರಾಹಕ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ, ಕಟಪಾಡಿ ವಿಶ್ವನಾಥ ಕ್ಷೇತ್ರದ ಕ್ಷೇತ್ರ ಆಡಳಿತ ಮಂಡಳಿಯ ಸದಸ್ಯರಾಗಿ, ಮತ್ತು ವಿವಿಧ ಸಂಘ ಸಂಸ್ಥೆ ಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಮತ್ತು ಉಡುಪಿ ಕಾರ್ಯನಿರತ ಪತ್ರಕರ್ತ ಸಂಘದ ಸದಸ್ಯರಾಗಿ ದ್ದಾರೆ.

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ವರದಿಗಾರ ವಾದಿರಾಜ್ ನಡಿಮನೆ ಹಾಗೂ ಕೋಶಾಧಿಕಾರಿಯಾಗಿ ಕರ್ನಾಟಕ ಮಲ್ಲ ಇದರ ವರದಿಗಾರರಾದ ಬಾಲಕೃಷ್ಣ ಪೂಜಾರಿ ಆಯ್ಕೆಯಾದರು.

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಪ್ರಮೋದ್ ಸುವರ್ಣ ಅವರು ನಿರ್ಗಮ ಅಧ್ಯಕ್ಷರಾದ ಪ್ರಕಾಶ್ ಸುವರ್ಣ ಅವರಿಂದ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಎಲ್ಲಾ ಸದಸ್ಯರು ಉಪಸ್ಥಿತಿದ್ದರು.


Spread the love