ಕಾರ್ಕಳ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿಯ ಬಂಧನ – ಎಸ್ಪಿ ಡಾ. ಅರುಣ್ ಕೆ

Spread the love

ಕಾರ್ಕಳ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿಯ ಬಂಧನ – ಎಸ್ಪಿ ಡಾ. ಅರುಣ್ ಕೆ

ಉಡುಪಿ: ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾರ್ಕಳ ನಿವಾಸಿ ಅಭಯ್ (23) ಎಂದು ಗುರುತಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಸೋಮವಾರ ಮೊದಲ ಆರೋಪಿ ಅಲ್ತಾಫ್ ಗೆ ಮಾದಕ ವಸ್ತುವನ್ನು ಕೊಟ್ಟಿರುವ ಆರೋಪದ ಮೇಲೆ ಅಭಯ್ ನನ್ನು ಬಂಧಿಸಿದ್ದು, ಇದರೊಂದಿಗೆ ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ. ಈಗ ಆತನನ್ನು ಬಂಧಿಸಿ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.

ಇದೇ ರೀತಿಯಲ್ಲಿ NDPS ಪ್ರಕರಣದಲ್ಲಿ ಅಭಯ್ ನನ್ನು ಬಂಧಿಸಲಾಗಿದ್ದು, ಅಲ್ಲದೆ ಇನ್ನು ಎರಡು ಸಂಶಯಿತ ವ್ಯಕ್ತಿಗಳನ್ನು ವಶಪಡಿಸಿಕೊಂಡಿರುತ್ತೇವೆ. ಅವರುಗಳನ್ನು ತನಿಖೆ ನಡೆಸಿ ಅವರುಗಳ ಪಾತ್ರದ ಬಗ್ಗೆ ತನಿಖೆ ನಡೆಸಿ, ಆದಷ್ಟು ಬೇಗನೆ ಪ್ರಕರಣವನ್ನು ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments