Home Mangalorean News Kannada News ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ದಕ ಜಿಲ್ಲೆಗೆ ಬೆಂಕಿ: ನಳಿನ್ ಕುಮಾರ್ ಕಟೀಲ್

ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ದಕ ಜಿಲ್ಲೆಗೆ ಬೆಂಕಿ: ನಳಿನ್ ಕುಮಾರ್ ಕಟೀಲ್

Spread the love

ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ದಕ ಜಿಲ್ಲೆಗೆ ಬೆಂಕಿ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಮಾಜಿ ತಾಲೂಕು ಪಂಚಾಯತ್ ಅವರ ಪುತ್ರ ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳ ಪತ್ತೆಗೆ ಆಗ್ರಹಿಸಿ ಕೊಣಾಜೆ ಪೋಲಿಸ್ ಠಾಣೆಯ ಎದುರು ಹಿಂದೂ ಹಿತರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು.

dk-will-burn-if-killers-of-karthik-raj-will-not-be-arrested-within-10-days-1

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ತಿಕ್ ರಾಜ್ ಹತ್ಯೆ ಸೇರಿದಂತೆ ಹಲವು ದುಷ್ಕತ್ಯಗಳು ನಡೆದಿದ್ದು, ಆ ಪ್ರಕರಣಗಳಿಗೆ ಸಂಬಂಧಿಸಿ ಅಪರಾಧಿಗಳನ್ನು ಬಂಧಿಸುವಲ್ಲಿ ಪೋಲಿಸರು ಹಾಗೂ ಸರಕಾರ ವಿಫಲವಾಗಿದೆ. ಈ ಎಲ್ಲಾ ಕ್ರಿಮಿನಲ್ ಚಟುವಟಿಕೆಗಳಿಗೆ ಈ ಭಾಗದ ಶಾಸಕರೇ ನೇರ ಹೊಣೆಯಾಗಿದ್ದು, ಇನ್ನೂ 10 ದಿನಗಳ ಒಳಗೆ ಕಾರ್ತಿಕ್ ರಾಜ್ ಕೊಲೆ ಆರೋಪಿಗಳನ್ನು ಬಂಧಿಸಿದಿದ್ದಲ್ಲಿ ಕೊಣಾಜೆ ಠಾಣೆಯೆದುರು ಪ್ರತಿಭಟನೆ ನಡೆಸುವುದಾಗಿ ಅಲ್ಲದೆ ಜಿಲ್ಲೆಗೆ ಬೆಂಕಿ ಬೀಳಲಿದೆ ಎಂದು ಎಚ್ಚರಿಸಿದರು.


Spread the love

Exit mobile version