ಕುಂದಾಪುರ | ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣ ಸಾವು

Spread the love

ಕುಂದಾಪುರ | ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣ ಸಾವು

ಕುಂದಾಪುರ: ಕಾರು ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ದ್ವಿಚಕ್ರ ವಾಹನ ಸವಾರರಾದ ರಾಜೀವ ಶೆಟ್ಟಿ (55), ಸುಧೀರ ದೇವಾಡಿಗ (35) ಮೃತರು ಎಂದು ಗುರುತಿಸಲಾಗಿದೆ.

ಘಟನೆ ವಿವರ: ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರಿ ಸಮೀಪದ ಬಿ.ಎಚ್. ಕಡೆಯಿಂದ ಕಂಡ್ಲೂರು ಕಡೆಯತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವೃತೆಗೆ ಕಾರಿನ ಮುಂಭಾಗ ಹಾಗೂ ಬೈಕ್ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಹಾಗೂ ಹೈವೇ ಪಟ್ರೋಲ್ ಸಿಬ್ಬಂದಿ ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಡಿ.ವೈ.ಎಸ್ಪಿ ಎಚ್.ಡಿ. ಕುಲಕರ್ಣಿ, ಪೊಲೀಸ್ ನಿರೀಕ್ಷಕ ನಂಜಪ್ಪ, ಗ್ರಾಮಾಂತರ ಠಾಣೆ ಪಿಎಸ್ಐ ನೂತನ್ ಭೇಟಿ‌ ನೀಡಿದರು.

ಈ ಬಗ್ಗೆ ಕುಂದಾಪುರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments