ಕುಖ್ಯಾತ ಕ್ರಿಮಿನಲ್, ರೌಡಿ ಶೀಟರ್ ಆಕಾಶ ಭವನ ಶರಣ್ ಬಂಧನ

Spread the love

ಕುಖ್ಯಾತ ಕ್ರಿಮಿನಲ್, ರೌಡಿ ಶೀಟರ್ ಆಕಾಶ ಭವನ ಶರಣ್ ಬಂಧನ

ಮಂಗಳೂರು: ಕುಖ್ಯಾತ ಕ್ರಿಮಿನಲ್, ರೌಡಿ ಶೀಟರ್ ಚರಣ್ ಯಾನೆ ಶರಣ್ ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರದ ಬಗ್ಗೆ ಜನವರಿ 7ರಂದು ಶರಣ್ ವಿರುದ್ಧ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಶರಣ್ ಹುಲಿವೇಷ ತರಬೇತಿ ನೀಡುತ್ತಿದ್ದು, ತರಬೇತಿಗಾಗಿ ಬಂದಿದ್ದ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಜಿಲ್ಲೆಯ ಹೊರಗಿನ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಅಲ್ಲಿ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ಆರೋಪಿ ಶರಣ್ ವಿರುದ್ಧ ಅತ್ಯಾಚಾರ, ಕೊಲೆ ಬೆದರಿಕೆ ಸೇರಿದಂತೆ ಪೊಕ್ಸೋ ಕಾಯ್ದೆಯಡಿ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸ್ ಬಲೆಗೆ ಬಿದ್ದಿದ್ದಾನೆ.

ರೌಡಿ ಶೀಟರ್ ಆಗಿರುವ ಆಕಾಶಭವನ ಶರಣ್ ವಿರುದ್ಧ ಹತ್ಯೆ ಪ್ರಕರಣ ಸೇರಿದಂತೆ ಕೊಲೆ ಮತ್ತು ಕೊಲೆ ಯತ್ನ, ಮಹಿಳೆಯೋರ್ವರ ಅತ್ಯಾಚಾರ ಸಹಿತ ಹಲವು ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love