Home Mangalorean News Kannada News ಕೊಕ್ಕಡದಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

ಕೊಕ್ಕಡದಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

Spread the love

ಕೊಕ್ಕಡದಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ:ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಕೊಕ್ಕಡ ಸಮೀಪ ರವಿವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಧರ್ಮಸ್ಥಳದ ಮುಳಿಕ್ಕಾರು ಮನೆ ವೀರಪ್ಪ ಮಲೆಕುಡಿಯ ಎಂಬವರ ಪುತ್ರ ದಿನೇಶ್ ಪಿ.(32) ಹಾಗೂ ಧರ್ಮಸ್ಥಳದ ಸಂದು ಲೈಟಿಂಗ್ಸ್‌ನ ಮಾಲಕ ಸಂದೇಶ್ (30) ಎಂದು ಗುರುತಿಸಲಾಗಿದೆ.

ಇವರಿಬ್ಬರು ಮಾರುತಿ 800 ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆ ಕೊಕ್ಕಡದ ಸಮೀಪದ ಪಾರ್ಪಿಕಲು ಬಳಿಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.

ಇವರು ಸಂಚರಿಸುತ್ತಿದ್ದ ಕಾರಿಗೆ ಧರ್ಮಸ್ಥಳದಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಗಂಭೀರ ಗಾಯಗೊಂಡಿದ್ದ ದಿನೇಶ್ ಮತ್ತು ಸಂದೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತಕ್ಕೊಳಗಾಗಿ ನಜ್ಜುಗುಜ್ಜಾಗಿದ್ದ ಕಾರಿನೊಳಗೆ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರಾದ ಶರೀಫ್ ಬೋಳದ ಬೈಲು, ಖಲಂದರ್ ಕೊಕ್ಕಡ, ಆರಿಫ್, ನವಾಝ್, ಶಫ್ವಾನ್, ರಾಜಾ ಟಿಪ್ಪುಸುಲ್ತಾನ್, ಲತೀಫ್ ಬೋಳದಬೈಲು ಮತ್ತಿತರರು ಹರಸಾಹಸ ಪಟ್ಟು ಹೊರತೆಗೆದು ನೆಲ್ಯಾಡಿಯ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಲಿಲ್ಲ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version