ಕೋಟೆಕಾರು ಕೊಂಡಾಣ ದೈವಸ್ಥಾನ ಆವರಣದಲ್ಲಿರುವ ನೂತನ ಕಟ್ಟಡ ಧ್ವಂಸ ಪ್ರಕರಣ: ವಿಷಾದ ವ್ಯಕ್ತಪಡಿಸಿದ ಸಭಾಧ್ಯಕ್ಷ ಯು.ಟಿ ಖಾದರ್ 

Spread the love

ಕೋಟೆಕಾರು ಕೊಂಡಾಣ ದೈವಸ್ಥಾನ ಆವರಣದಲ್ಲಿರುವ ನೂತನ ಕಟ್ಟಡ ಧ್ವಂಸ ಪ್ರಕರಣ: ವಿಷಾದ ವ್ಯಕ್ತಪಡಿಸಿದ ಸಭಾಧ್ಯಕ್ಷ ಯು.ಟಿ ಖಾದರ್ 

ಉಳ್ಳಾಲ ತಾಲೂಕಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ ದೇವಸ್ಥಾನದ ಆವರಣದಲ್ಲಿರುವ ನೂತನ ಕಟ್ಟಡ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ ಸಭಾಧ್ಯಕ್ಷ ಯು ಟಿ ಖಾದರ್ ವಿಷಾದ ವ್ಯಕ್ತ ಪಡಿಸಿದ್ದಾರೆ.

ಈ ಘಟನೆಯು ಇಡೀ ಜಿಲ್ಲೆಗೆ ಕಪ್ಪು ಚುಕ್ಕೆಯಾಗಿದ್ದು ಅತ್ಯಂತ ನೋವಿನ ವಿಚಾರ ಎಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಸ್ಥಳೀಯ ಶಾಸಕ ಸಭಾಧ್ಯಕ್ಷ ಯು ಟಿ ಖಾದರ್ ಪ್ರತಿಕ್ರಿಯಿಸಿ ಘಟನೆಯ ಕುರಿತಾಗಿ ಯಾವುದೇ ರೀತಿಯ ಧಾರ್ಮಿಕ ಭಾವನೆಗೆ ದಕ್ಕೆ ಬಾರದ ರೀತಿಯಲ್ಲಿ ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.


Spread the love