Home Mangalorean News Kannada News ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿದ ಪೊಲೀಸರು

ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿದ ಪೊಲೀಸರು

Spread the love

ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿದ ಪೊಲೀಸರು

ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿ ಮೋರ್ ಸೂಪರ್ ಮಾರ್ಕೆಟ್ ಬಳಿ ಗಾಂಜಾ ಸೇವನೆಯಲ್ಲಿ ತೊಡಗಿದ್ದ 02 ಜನರನ್ನು ಆರೋಪಿತರನ್ನು ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿರುತ್ತಾರೆ.

ಬಂಧಿತರನ್ನು ಕುಂಜತ್ತೂರು ನಿವಾಸಿ ಖಲೀಲ್ ಕಾಲೀದ್ (23) ಮತ್ತು ಅಬ್ದುಲ್ ನಾಸೀರ್ ಇಬ್ರಾಹಿಂ (22) ಎಂದು ಗುರುತಿಸಲಾಗಿದೆ.

ನವೆಂಬರ್ 3 ರಂದು ಖಲೀಲ್ ಕಾಲೀದ್, ಅಬ್ದುಲ್ ನಾಸೀರ್ ಇಬ್ರಾಹಿಂ ಇವರುಗಳನ್ನು ಗಾಂಜಾ ಸೇವನೆ ಮಾಡುತ್ತಿದ್ದಾಗ ಕೃತ್ಯಕ್ಕೆ ಬಳಸಿದ ಕೆಎಲ್14ಯು2350 ಯಮಹಾ ಎಫ್.ಝಡ್ ಮೋಟಾರ್ ಸೈಕಲ್ ನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ಉರ್ವ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿರುತ್ತದೆ.

ಸದ್ರಿ ಕಾರ್ಯಾಚರಣೆಯಲ್ಲಿ ಕೇಂದ್ರ ಉಪವಿಭಾಗದ ರೌಡಿ ಅಧಿಕಾರಿ ಹಾಗೂ ಸಿಬ್ಬಂದಿಯವರು ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.


Spread the love

Exit mobile version