ಗೌರಿ ಗಣೇಶ ಹಬ್ಬ, ಈದ್ ಮಿಲಾದ್ ಆಚರಣೆ: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಆಯೋಜಕರಿಗೆ ಸೂಚನೆಗಳು

Spread the love

ಗೌರಿ ಗಣೇಶ ಹಬ್ಬ, ಈದ್ ಮಿಲಾದ್ ಆಚರಣೆ: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಆಯೋಜಕರಿಗೆ ಸೂಚನೆಗಳು

ಮಂಗಳೂರು: ಸಪ್ಟೆಂಬರ್ 6ರಂದು ಗೌರಿ ಗಣೇಶ ಹಬ್ಬವು ಪ್ರಾರಂಭಗೊಂಡು ಮಂಗಳೂರು ನಗರ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬೃಹತ್ ಮೆರವಣಿಗಗಳ ಮುಖಾಂತರ ಗಣೇಶ ಮೂರ್ತಿಯನ್ನು ನದಿ, ಕೆರೆ ಮತ್ತು ಸಮುದ್ರದ ನೀರಿನಲ್ಲಿ ವಿಸರ್ಜನೆ ಮಾಡುವ ಮೂಲಕ ಆಚರಣೆ ಮಾಡಲಾಗುತ್ತದೆ. ಹೀಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 165 ಕಡೆಗಳಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆಯನ್ನು ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಅದೇ ರೀತಿ ಸಪ್ಟೆಂಬರ್ 15/19 ರಂದು ಮುಸ್ಲಿಂ ಬಾಂದವರು ಈದ್-ಮಿಲಾದ್ ಹಬ್ಬದ ಆಚರಣೆಯನ್ನು ಮಾಡಲಿರುವರು.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಪ್ಟೆಂಬರ್ 6 ರಿಂದ ವರೆಗೆ ಒಟ್ಟು 165 ಕಡೆಗಳಲ್ಲಿ ಸಾರ್ವಜನಿಕ ಗಣೇಶ ಮಹೋತ್ಸವನ್ನು ಆಚರಣೆ ಮಾಡಲಿರುವುದು. ಇವುಗಳಲ್ಲಿ ಗಣೇಶ ಪ್ರತಿಷ್ಠಾಪನೆ 22-ಅತೀಸೂಕ್ಷ್ಮ, 64-ಸೂಕ್ಷ್ಮ ಮತ್ತು 79-ಸಾಮಾನ್ಯ ಪ್ರತಿಷ್ಠಾಪನಾ ಮೆರವಣಿಗೆಗಳೆಂದು ಪರಿಗಣಿಸಲಾಗಿರುತ್ತದೆ.

ಈ ನಡುವೆ ಮುಸ್ಲಿಂ ಬಾಂದವರು ಸಪ್ಟೆಂಬರ್ 15/19 ರಂದು ಈದ್ ಮಿಲಾದ್ ಹಬ್ಬವನ್ನು ಆಚರಿಸಲಿರುತ್ತಾರೆ. ಈ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ಧ ರೀತಿಯಲ್ಲಿ ಆಚರಣೆಯನ್ನು ನಡೆಸಬೆಕಾದ ಹಿನ್ನಲೆಯಲ್ಲಿ ಮಂಗಳೂರು ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಸಂಬಂಸಿದಂತೆ ಎಲ್ಲಾ ಧರ್ಮದ ಹಿರೀಯ ಮುಖಂಡರುಗಳನ್ನು ಕರೆಸಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯ ಸಭಾಂಗಣದಲ್ಲಿ ಪೊಲೀಸ್ ಆಯುಕ್ತರು, ಮಂಗಳೂರು ನಗರ ರವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ಸೋಮವಾರ ಅಯೋಜಿಸಲಾಗಿರುತ್ತದೆ.

ಸಭೆಯಲ್ಲಿ ಎಲ್ಲಾ ಧಾರ್ಮಿಕ ಹಿರಿಯ ಮುಖಂಡರುಗಳಿಗೆ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಆಚರಣೆಯ ಪ್ರಯುಕ್ತ ಅನುಸರಿಬೇಕಾದ ನಿಯಮಗಳ ಬಗ್ಗೆ ಸೂಚನೆಗಳನ್ನು ನೀಡಲಾಯಿತು.

ಗಣಪತಿ ಉತ್ಸವ ಕಾರ್ಯಕ್ರಮಗಳ ಆಯೋಜಕರಿಗೆ ಸೂಚನೆಗಳು

  •  ಪ್ರತಿಷ್ಠಾಪನೆಯ ಮೊದಲು ಮೆಸ್ಕಾಂ, ಆಗ್ನಿ ಶಾಮಕ ನಿಗಮ/ಸ್ಥಳೀಯ ಸಂಸ್ಥೆಗಳಿಂದ ಅನುಮತಿಗಳನ್ನು ಪಡೆದುಕೊಳ್ಳಬೇಕು.
  • ಗಣಪತಿ ವಿಗ್ರಹ ಪ್ರತಿಷ್ಠಾನೆಯ ಸ್ಥಳದ ಮಾಲಿಕರ ಅನುಮತಿಯನ್ನು ಪಡೆದುಕೊಳ್ಳಬೇಕು.
  • ಗಣೇಶ ಪೆಂಡಾಲುಗಳನ್ನು ಹಾಕುವಾಗ ಭದ್ರವಾಗಿ ಸುರಕ್ಷಿತವಾಗಿ ಹಾಕಲು ವ್ಯವಸ್ಥೆ ಮಾಡುವುದು ಮತ್ತು ಸದರಿ ಪೆಂಡಾಲ್ ಮಳೆ, ಗಾಳಿ, ಬೆಂಕಿಗಳಿಂದ ಸುರಕ್ಷಿತವಾಗಿರುವಂತೆ ನಿಗಾವಹಿಸಿಲು ಸೂಚಿಸಲಾಗಿದೆ.
  • ಗಣೇಶ ಮಂಟಪದೊಳಗೆ ದೀಪ ಇಡುವ ಸ್ಥಳದ ಬಳಿ ಬೆಂಕಿಯನ್ನು ಸ್ಪರ್ಷಿಸುವಂತಹ ವಸ್ತುಗಳನ್ನು ಇಡಬಾರದು, ಬೆಂಕಿ ಆಕಸ್ಮಿಕದಿಂದ ಅವಘಡ ತಡೆಗಟ್ಟುವ ಸಲುವಾಗಿ ಅಗ್ನಿನಂದಕ ಸಲಕರಣೆಗಳಾದ ಮರಳು ಮತ್ತು ನೀರು ತುಂಬಿದ ಬಕೇಟ್ ಗಳು, ಫೈರ್ ಎಕ್ಸಿಂಗ್ಯೂಷನ್ನು ಇಟ್ಟುಕೊಳ್ಳುವುದು.
  • ವೇದಿಕೆಯ ಮೇಲೆ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರ ಪ್ರಮುಖರ ಹೆಸರು, ವಿಳಾಸ, ಮೊಬೈಲ್ ನಂಬ್ರದ ವಿವರವಾದ ಪಟ್ಟಿಯನ್ನು ಮುಂಚಿತವಾಗಿ ಪೊಲೀಸ್ ಠಾಣೆಗೆ ನೀಡುವುದು.
  • ಕಾರ್ಯಕ್ರಮಕ್ಕೆ ಸಂಬಂಧಿಸಿ ಸಾರ್ವಜನಿಕ ಸ್ಥಳದಲ್ಲಿ ಪ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ಅಳವಡಿಸುವ ಪೂರ್ವದಲ್ಲಿ ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದಿಂದ ಕಡ್ಡಾಯವಾಗಿ ಅನುಮತಿಯನ್ನು ಪಡೆದುಕೊಳ್ಳಬೇಕು.
  • ಕಾರ್ಯಕ್ರಮಕ್ಕೆ ಸಂಬಂಧಿಸಿ ಅಳವಡಿಸುವ ಪ್ಲೆಕ್ಸ್, ಬ್ಯಾನರ್ಗಳಲ್ಲಿ ಯಾವುದೇ ಪ್ರಚೋದನಾತ್ಮಕ ಬರಹಗಳು/ಚಿತ್ರಗಳನ್ನು ಬಳಸಬಾರದು.
  • ಯಾವುದೇ ಧರ್ಮ/ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವಂತಹ ಟ್ಯಾಬ್ಲೊ, ನೃತ್ಯರೂಪಕ ಇರಬಾರದು.
  • ಸುಡುಮದ್ದು ಬಳಸುವಾಗ ಆಸ್ಪತ್ರೆಗಳ ಬಳಿ, ಜನ ಸಂದಣಿಯ ಮಧ್ಯೆ ಬಳಸಬಾರದು ಹಾಗೂ ರಾತ್ರಿ 10:00 ಗಂಟೆಯ ನಂತರ ಸುಡುಮದ್ದು/ಪಟಾಕಿಗಳನ್ನು ಬಳಸುವಂತಿಲ್ಲ.
  • ಬ್ಯಾನರ್ಗಳು ಹಾಗೂ ಕಟೌಟ್ಗಳನ್ನು ಅಳವಡಿಸುವ ಸ್ಥಳಗಳು ಯಾವುದೇ ಸಂಚಾರ ದಟ್ಟಣೆ ಅಥವಾ ಸಾರ್ವಜನಿಕ ತೊಂದರೆಗೆ ಕಾರಣವಾಗದಂತೆ ನೋಡಿಕೊಳ್ಳುವುದು.
  • ಗಣೇಶ ವಿಸರ್ಜನೆಯ ದಿನಾಂಕ, ವೇಳೆ, ಮಾರ್ಗ ಮುಂತಾದ ವಿವರಗಳನ್ನು ಮುಂಚಿತವಾಗಿ ಸಂಬಂಧಿಸಿದ ಪೊಲೀಸ್ ನಿರೀಕ್ಷಕರು ಮತ್ತು ಎ.ಸಿ.ಪಿ ರವರಿಗೆ ನೀಡಿ ಮಂಜೂರಾತಿ ಪಡೆದುಕೊಳ್ಳುವುದು.
  • ಪೊಲೀಸ್ ಇಲಾಖೆಯಿಂದ ಅಂತಿಮಗೊಳಿಸಲಾದ ಮಾರ್ಗದಲ್ಲಿ ಮಾತ್ರ ಮೆರವಣಿಗೆ ಸಾಗುವುದು.
  • ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಇತರ ಧರ್ಮಗಳ ವಿರುದ್ಧ ಪ್ರಚೋಧನಾಕಾರಿ ಘೋಷಣೆಗಳನ್ನು ಕೂಡಗಬಾರದು
  • ಕಾರ್ಯಕ್ರಮ ಸ್ಥಳಗಳಲ್ಲಿ ಅಯೋಜಕರುಗಳು ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆಮಾಡಿಕೊಳ್ಳುವುದು ಸೂಕ್ತ ಪಾಕಿಂಗ್ ವ್ಯವಸ್ಥೆಗೆ ತಮ್ಮ ಸಂಘದ ವತಿಯಿಂದ ಸ್ವಯಂ ಸೇವಕರನ್ನು ನೇಮಿಸಿ ಕಾರ್ಯಕ್ರಮ ಸ್ಥಳಗಳಲ್ಲಿ ಸುಗಮ ಸಂಚಾರ ವ್ಯವಸ್ಥೆಗೆ ಅಡೆ ತಡೆ ಉಂಟಾಗದಂತೆ ನೋಡಿಕೊಳ್ಳುವುದು.
  • ಆಯೋಜಕರುಗಳು ತುರ್ತು ಸಂದರ್ಭದಲ್ಲಿ ಬಳಸಲು ಅನೂಕುಲವಾಗುವಂತೆ ಮೆರವಣಿಗೆಯಲ್ಲಿ ಒಂದು ಸುಸಜ್ಜಿತ ಆಂಬ್ಯುಲೆನ್ಸ್ ವ್ಯವಸ್ಥೆಗೊಳಿಸಬೇಕು.
  • ಪಿಟ್ನೆಸ್ ಸರ್ಟಿಪಿಕೇಟ್, ಇನ್ಸುರೆನ್ಸ್ ಸರ್ಟಿಫಿಕೇಟ್ ಇರುವ ವಾಹನಗಳಲ್ಲಿ ಮಾತ್ರ ಸ್ಥಬ್ದಚಿತ್ರವನ್ನು ಅಳವಡಿಸಲು ಉಪಯೋಗಿಸುವುದು.
  • ಕಾರ್ಯಕ್ರಮ/ ಮೆರವಣಿಗೆ ಸಮಯದಲ್ಲಿ ಸ್ವಯಂ ಸೇವಕರಿಗೆ ಒಂದೇ ರೀತಿಯ ಬಣ್ಣದ ಉಡುಪುಗಳು ನೀಡುವುದು.
  • ಸ್ವಯಂ ಸೇವಕರನ್ನು ಗೊಂಪುಗಳನ್ನಾಗಿ ವಿಂಗಡಿಸಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ನಿಯೋಜಿಸಿ ಮೆರವಣಿಗೆ ಸುಲಲಿತವಾಗಿ ಸಾಗುವಂತೆ ಮಾಡುವುದು.
  • ಕಾರ್ಯಕ್ರಮಕ್ಕೆ ಬರುವ ಜನರ ವಾಹನ ಪಾರ್ಕಿಂಗ್ಗೆ ಸ್ಥಳ ಗುರುತಿಸುವುದು. ಮೆರವಣಿಗೆ ಹಾದು ಹೋಗುವ ರಸ್ತೆಯಲ್ಲಿ ವಾಹನಗಳ ನಿಲುಗಡೆಯಾಗದಂತೆ ಸ್ವಯಂ ಸೇವಕರನ್ನು ನಿಯೋಜಿಸುವುದು.
  • ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಬಂದೋಬಸ್ತ್ ಕರ್ತವ್ಯದಲ್ಲಿ ಇರುವ ಪೊಲೀಸ್ ಅಧಿಕಾರಿಗಳ ಸೂಚನೆಗಳನ್ನು ಪಾಲಿಸುವುದು ಮತ್ತು ಪೊಲೀಸರೊಂದಿಗೆ ಸಂಘಟಕರು ಸಹಕರಿಸುವುದು.

ಧ್ವನಿವರ್ಧಕ ಅಳವಡಿಸುವವರಿಗೆ ಸೂಚನೆಗಳು

  • ಸ್ಥಬ್ಧಚಿತ್ರಗಳಲ್ಲಿ/ಕಾರ್ಯಕ್ರಮ ಸ್ಥಳಗಳಲ್ಲಿ ಧ್ವನಿವರ್ಧಕವನ್ನು ಅಳವಡಿಸುವ ಮೊದಲು ಪೊಲೀಸ್ ಇಲಾಖೆಯಿಂದ ಪಡೆಯಲಾದ ಪರವಾನಿಗೆಯನ್ನು ಪರಿಶೀಲಿಸಿ ಅನುಮತಿ ಇದ್ದಲ್ಲಿ ಮಾತ್ರ ಧ್ವನಿವರ್ಧಕವನ್ನು ಅಳವಡಿಸುವುದು.
  • ಪೊಲೀಸ್ ಇಲಾಖೆಯಿಂದ ನೀಡಲಾದ ಪರವಾನಿಗೆಯಲ್ಲಿ ನಿಗದಿಪಡಿಸಿದ ಸಮಯದವರೆಗೆ ಮಾತ್ರ ಧ್ವನಿವರ್ಧಕವನ್ನು ಬಳಸುವುದು.
  • ಡಿ.ಜೆ ಬಳಸಲು ಅವಕಾಶ ಇರುವುದಿಲ್ಲ.
  • ಆಸ್ಪತ್ರೆ, ಶೀಕ್ಷಣ ಸಂಸ್ಥೆಗಳ ಬಳಿ ಧ್ವನಿವರ್ಧಕ ಅಳವಡಿಸಬಾರದು.

Spread the love
Subscribe
Notify of

0 Comments
Inline Feedbacks
View all comments