ಚಾಮರಾಜನಗರ: ಬೈಕ್ ಡಿಕ್ಕಿಯಾಗಿ ಹಿಂಬದಿ ಸವಾರ ಸಾವು

Spread the love

ಚಾಮರಾಜನಗರ: ಬೈಕ್ ಡಿಕ್ಕಿಯಾಗಿ ಹಿಂಬದಿ ಸವಾರ ಸಾವು

ಚಾಮರಾಜನಗರ: ಬೈಕ್ ಗೆ ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ನಡೆದ ಅವಘಡದಲ್ಲಿ ಹಿಂಬದಿ ಸವಾರ ಮೃತಪಟ್ಟ ದುರ್ಘಟನೆ ನಗರದ ಜಾಲಹಳ್ಳಿಹುಂಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಚಾಮರಾಜನಗರದ 17ನೇ ವಾರ್ಡ್‌ ಉಪ್ಪಾರ ಬೀದಿಯ ನಿವಾಸಿ, ಪ್ರಸ್ತುತ ಜಾಲಹಳ್ಳಿಹುಂಡಿಯಲ್ಲಿ ವಾಸವಾಗಿದ್ದ ಕೃಷ್ಣ ಎಂಬುವವರ ಪುತ್ರ ಮೋಹನ್ (27) ಮೃತಪಟ್ಟ ಯುವಕ. ಈತ ಮಂಗಳವಾರ ರಾತ್ರಿ 9 ಗಂಟೆ ಸಮಯದಲ್ಲಿ ಚಾಮರಾಜನಗರದ ಜಿಮ್‌ ವೊಂದರಲ್ಲಿ ವರ್ಕೌಟ್ ಮುಗಿಸಿ ಸ್ನೇಹಿತ ಮನೋಹರ್ ಬೈಕ್‌ನಲ್ಲಿ ಜಾಲಹಳ್ಳಿಹುಂಡಿಗೆ ತೆರಳಿದ್ದಾನೆ. ಈ ವೇಳೆ ಗ್ರಾಮದ ಕಡೆ ಬೈಕ್ ಕ್ರಾಸ್ ಮಾಡುವ ಸಂದರ್ಭದಲ್ಲಿ ಚಾಮರಾಜನಗರ ಕಡೆಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮೋಹನ್ ಕೆಳಗೆ ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಬೈಕ್ ಓಡಿಸುತ್ತಿದ್ದ ಮನೋಹರ್ ಹಾಗೂ ಮತ್ತೊಂದು ಬೈಕ್‌ನ ರಾಮಸಮುದ್ರದ ಮಹೇಶ್ ಎಂಬುವವರಿಗೂ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಚಾಮರಾಜನಗರ ಸಂಚಾರ ಠಾಣೆ ಪೊಲೀಸರು ಮೋಹನ್ ಮೃತದೇಹವನ್ನು ಸಿಮ್ಸ್ ಬೋಧನಾ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು.

ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments